ಸಾರಾಂಶ
ಹೊಸಬರ ಅಧ್ಯಾಯ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆಯಿತು.
ಸಿನಿವಾರ್ತೆ
ಸಮರ್ಥ್ ಎಂ ನಿರ್ದೇಶನದ ‘ಅಧ್ಯಾಯ’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಶಾಂತ ಜಯರಾಂ ನಿರ್ಮಾಣದ ಈ ಚಿತ್ರದಲ್ಲಿ ಚೈತನ್ಯ ಬಂಜಾರ ನಾಯಕನಾಗಿ ನಟಿಸುತ್ತಿದ್ದಾರೆ.
ಕನ್ನಡ ಹಾಗೂ ಬಂಜಾರ ಭಾಷೆಗಳಲ್ಲಿ ಮೂಡಿ ಬರಲಿರುವ ಈ ಸಿನಿಮಾ ಶಿಕ್ಷಣದಿಂದ ದೂರವೇ ಉಳಿದಿದ್ದ ಒಂದು ಬುಡಕಟ್ಟು ಜನಾಂಗದ ಮಕ್ಕಳು ವಿದ್ಯಾವಂತರಾದ ಮೇಲೆ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕತೆ.