ಸಮಾಜಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಕೊಡುಗೆ ಅಪಾರ

| Published : May 07 2024, 01:03 AM IST

ಸಮಾಜಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಕೊಡುಗೆ ಅಪಾರ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ಕೋಟೆ ಭಾಗದಲ್ಲಿರುವ ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ನಂತರ ಒಂದು ತಿಂಗಳ ಜಂಗಮ ಆರಾಧನೆಯನ್ನು 55 ಕಿಂತ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕುಣಿಗಲ್ ಪಟ್ಟಣದ ಕೋಟೆ ಭಾಗದಲ್ಲಿರುವ ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ನಂತರ ಒಂದು ತಿಂಗಳ ಜಂಗಮ ಆರಾಧನೆಯನ್ನು 55 ಕಿಂತ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.

ಕೊಡಗು, ಮಂಡ್ಯ, ಹಾಸನ, ಮೈಸೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ 55ಕ್ಕಿಂತ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿದ್ದರು. ಲಿಂಗೈಕ್ಯ ಸ್ವಾಮೀಜಿ ಅವರ ಗದ್ದುಗೆಯನ್ನು ವಿವಿಧ ಪುಷ್ಪಗಳಿಂದ ಶೃಂಗರಿಸಲಾಗಿತ್ತು. ಗದ್ದುಗೆಯ ಬಳಿ ವಿವಿಧ ರೀತಿಯ ಅಭಿಷೇಕ, ಶಿವಪೂಜೆ, ರುದ್ರಾಭಿಷೇಕ ಸೇರಿದಂತೆ ಗುರುಗಳ ಪಾದ ಪೂಜೆ ನಡೆಯಿತು.

ನೆಲಮಂಗಲದ ಬಸವಣ್ಣ ದೇವರ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ತಮ್ಮದೇ ಆದ ಹಲವಾರು ಭಕ್ತರನ್ನು ಹೊಂದಿದ್ದರು. ಉತ್ತಮ ಜನಸೇವೆ ಹಾಗೂ ಪೂಜೆಗಳಿಂದ ಭಕ್ತರನ್ನು ಆಕರ್ಷಿಸುತ್ತಿದ್ದರು. ಮುಂದಿನ ದಿನಗಳಲ್ಲಿ ವಟುಗಳನ್ನು ಹುಡುಕಿ ಆದಷ್ಟು ಬೇಗ ಮಠಕ್ಕೆ ಪೀಠಾಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದರು,

ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹಿತ್ತಲಹಳ್ಳಿ ಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ, ನಿಜಗುಣ ಸ್ವಾಮೀಜಿ ಭಾಗವಹಿಸಿದ್ದರು.