ಅಪರಾಧ ತಡೆಯುವ ನಿಟ್ಟಿನಲ್ಲಿ ಗಸ್ತು ಹೆಚ್ಚಿಸಿ ಶಾಸಕ ಬಾಲಕೃಷ್ಣ

Aug 01 2025, 11:45 PM IST
ವಾಹನ ಕಳ್ಳತನ, ಸರಗಳ್ಳತನ, ದರೋಡೆ ಮುಂತಾದ ಗಂಭೀರ ಅಪರಾಧಗಳ ತಡೆಯುವ ನಿಟ್ಟಿನಲ್ಲಿ ರಾತ್ರಿ ಗಸ್ತನ್ನು ಹೆಚ್ಚಿಸುವಂತೆ ಶಾಸಕ ಸಿ.ಎನ್. ಬಾಲಕೃಷ್ಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ೩೬ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಅದರಲ್ಲಿ ೨೫ ಕ್ಯಾಮರಾಗಳು ಉತ್ತಮ ಸ್ಥಿತಿಯಲ್ಲಿವೆ. ಉಳಿದ ೧೬ ಕ್ಯಾಮರಾಗಳು ಸುಸ್ಥಿತಿಯಲ್ಲಿಲ್ಲ. ಪುರಸಭೆ ವತಿಯಿಂದ ಹೊಸದಾಗಿ ೧೬ ಕ್ಯಾಮರಾಗಳನ್ನು ಇಲಾಖೆಗೆ ನೀಡಲಾಗುವುದು. ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಆಯಕಟ್ಟಿನ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ಹಿರೀಸಾವೆ, ನುಗ್ಗೇಹಳ್ಳಿ, ಶ್ರವಣಬೆಳಗೊಳ ಹೋಬಳಿ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಯಾ ಗ್ರಾಮ ಪಂಚಾಯಿತಿಗಳ ನೆರವು ಪಡೆಯಲಾಗುವುದು ಎಂದರು.