ಸ್ವಂತ ಸಾಮರ್ಥ್ಯದಲ್ಲಿ ಅನುದಾನ ತರದೆ ಕಾಂಗ್ರೆಸ್‌ ಮೇಲೆ ಟೀಕೆ

Nov 04 2025, 12:15 AM IST
ಗ್ರಾಮೀಣ ರೈತರ ಸಮಸ್ಯೆ ಬಗ್ಗೆ ಚಿಂತನೆ ಮಾಡದೇ ಪ್ರತಿ ಭಾಷಣದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಶಾಸಕ ಎಚ್. ಕೆ ಸುರೇಶ್ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಟೀಕೆ ಮಾಡುವುದು ಬಿಟ್ಟು ತಮ್ಮ ಶ್ರಮದಿಂದ ಅನುದಾನ ತಂದು ಕೆಲಸ ಮಾಡಲಿ ಎಂದು ಮಾಜಿ ಶಾಸಕ ಬಿ. ಶಿವರಾಂ ಕಿಡಿಕಾರಿದರು. ಸರ್ಕಾರದ ವಿರುದ್ಧ ಶಾಸಕರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಅದು ಶುದ್ಧ ಸುಳ್ಳು ಎನ್ನುವುದಕ್ಕೆ ಸಾಕ್ಷಿಯಾಗಿ ತಮ್ಮ ಪ್ರಾಮಾಣಿಕ ಪ್ರಯತ್ನದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 127.37 ಕೋಟಿ ಅನುದಾನಕ್ಕೆ ಅನುಮೋದನೆ ಸರ್ಕಾರದಿಂದ ದೊರಕಿದ್ದು ನಮ್ಮ ಪಕ್ಷ ಟೀಕೆ ಮಾಡುವವರಿಗೆ ಉತ್ತರ ದೊರಕಿದಂತಾಗಿದೆ ಎಂದರು.