• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿವ ನೀರಿನ ಯೋಜನೆ ಕಾಮಗಾರಿ ತ್ವರಿತವಾಗಿ ಮುಗಿಸಿ-ಸಚಿವ ಪಾಟೀಲ

Nov 01 2025, 02:30 AM IST
ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ವಿವಿಧ ಯೋಜನಾ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ, ತ್ವರಿತವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕಳಪೆ ಕಾಮಗಾರಿ ಸಹಿಸೋದಿಲ್ಲ

Oct 31 2025, 02:15 AM IST
ಯಾವುದೇ ಕೆಲಸವಾಗಲಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ಮುಗಿಸಿದ ಬಳಿಕ ಪರಿಶೀಲನೆ ಮಾಡಲಾಗುವುದು. ಕಳಪೆ ಕಂಡುಬಂದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುವುದು. ಹೊಸ ರಸ್ತೆ ಕಟ್ಟಿಂಗ್ ಮಾಡಿದವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಸೂಚಿಸಿದ್ದಾರೆ.

ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಆಗ್ರಹ

Oct 31 2025, 02:00 AM IST
ಹೆದ್ದಾರಿಗೆ ನಿರ್ಮಿಸಲಾಗಿರುವ ಸೇತುವೆ ಕಾಮಗಾರಿಯೂ ಮಂದಗತಿಯಲ್ಲಿ ಸಾಗುತ್ತಿವೆ. ಇದರಿಂದಾಗಿ ರಸ್ತೆ ಕಾಮಗಾರಿಯೂ ಸಹ ವಿಳಂಬವಾಗುತ್ತಿದೆ. ವಾಹನ ಸವಾರರಿಗೆ ಅನಾನೂಕೂಲವಾಗುತ್ತಿದೆ. ಈ ಸ್ಥಳದಲ್ಲಿ ಹೆಚ್ಚು ರಸ್ತೆ ಅಪಘಾತಗಳು ನಡೆದು ಸಾವು ನೋವು ಸಂಭವಿಸುತ್ತಿವೆ.

ಶ್ರೀರಂಗನಾಥಸ್ವಾಮಿ ದೇಗುಲದಲ್ಲಿ ತುರ್ತು ಕಾಮಗಾರಿ ನಡೆಸಲು ನಿರ್ಧಾರ

Oct 29 2025, 01:15 AM IST
ಆದಿರಂಗನಾಥಸ್ವಾಮಿ ದೇವಾಲಯಕ್ಕೆ ಸಂಬಂಧಿಸಿದಂತೆ ಇದ್ದ ಹಲವು ಕಾನೂನಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ. 2018ರಿಂದಲೂ ರಾಜಗೋಪುರದ ಸುಣ್ಣ ಬಣ್ಣ ಬಳಿಸುವ ಕೆಲಸವನ್ನೂ ಮಾಡಲಾಗಿಲ್ಲ. ಇದೀಗ ದೇವಾಲಯದ ಹಣದಿಂದಲೇ ಕೆಲ ಕಾಮಗಾರಿಗಳನ್ನು ನಿರ್ವಹಿಸಲು ನಿರ್ಧರಿಸಲಾಗಿದೆ.

ಗುಣಮಟ್ಟ ಕಳೆದುಕೊಂಡ ಜಲಜೀವನ್‌ ಮಿಷನ್‌ ಕಾಮಗಾರಿ

Oct 29 2025, 01:00 AM IST
285 ಕೋಟಿ ರುಪಾಯಿ ವೆಚ್ಚದಲ್ಲಿ ಅರಕಲಗೂಡು ತಾಲೂಕಿನ 36 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೇ. 50ರಷ್ಟು ಅನುದಾನ ನೀಡುತ್ತಿವೆ. ಸರ್ಕಾರದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆ ಕಾಮಗಾರಿ ತಾಲೂಕಿನಲ್ಲಿ ಕುಂಟುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಕಷ್ಟು ಹಳ್ಳಿಗಳಲ್ಲಿ ಅಪೂರ್ಣಗೊಂಡಿರುವ ಕಾಮಗಾರಿ ಮುಗಿಸದೆ ನಿರ್ಲಕ್ಷಿಸಲಾಗಿದೆ.

ವಿದ್ಯುದೀಕರಣ ಕಾಮಗಾರಿ: ಮಂಗಳೂರು-ಬೆಂಗಳೂರು ರೈಲು ಓಡಾಟದಲ್ಲಿ ವ್ಯತ್ಯಯ

Oct 28 2025, 01:00 AM IST
ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು, ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಸ್ಥಗಿತಗೊಂಡ ನೀರಾವರಿ ಕಾಮಗಾರಿ ಪುನರಾರಂಭಿಸಲು ಪ್ರತಿಭಟನೆ

Oct 28 2025, 12:03 AM IST
ಚಿಕ್ಕಮಗಳೂರು ಸ್ಥಗಿತಗೊಂಡಿರುವ ನೀರಾವರಿ ಕಾಮಗಾರಿಯನ್ನು ಪುನಾರಂಭಿಸಲು ಆಗ್ರಹಿಸಿ ಸೋಮವಾರ ನಾಗೇನಹಳ್ಳಿ ಹಾಗೂ ಬೆರಟಿಕೆರೆ ನೀರು ತುಂಬಿಸುವ ಹೋರಾಟ ಸಮಿತಿಯಿಂದ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.

ಚಿನಮಳ್ಳಿ ಬಾಂದಾರು ತಾತ್ಕಾಲಿಕ ರಸ್ತೆ ಕಾಮಗಾರಿ ಆರಂಭ

Oct 27 2025, 12:00 AM IST
ಇತ್ತೀಚೆಗೆ ತಾಲೂಕಿನಲ್ಲಿ ಸುರಿದ ಅಪಾರ ಪ್ರಮಾಣದ ಮಳೆಗೆ ಮತ್ತು ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾನದಿಗೆ ಬಿಟ್ಟಿರುವುದರಿಂದ ಪ್ರವಾಹಕ್ಕೆ ಚಿನಮಳ್ಳಿ ಮತ್ತು ಜೇವರ್ಗಿ ತಾಲೂಕಿನ ಕಲ್ಲೂರ ಮದ್ಯ ನಿರ್ಮಾಣ ಮಾಡಿರುವ ಬ್ರಿಡ್ಜ್ ಕಂ ಬ್ಯಾರೇಜ್ ಚಿನಮಳ್ಳಿ ಎಡದಂಡೆ ರೈತರ ಜಮೀನು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಮೂಲಕ ಮಂದೇವಾಲ ಮತ್ತು ನೆಲೋಗಿ ಗ್ರಾಮಕ್ಕೆ‌ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಸೇತುವೆಯ ಕಳಪೆ ಕಾಮಗಾರಿ ಬಟಾಬಯಲು

Oct 27 2025, 12:00 AM IST
ಇತ್ತೀಚೆಗೆ ಭೀಮಾ ನದಿ ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗಿರುವ ಜೇವರ್ಗಿ ತಾಲೂಕಿನ ನರಿಬೋಳ ಹಾಗೂ ಚಿತ್ತಾಪುರ ತಾಲೂಕಿನ ಚಾಮನೂರ ಬಳಿಯ ನಿರ್ಮಾಣ ಹಂತದಲ್ಲಿ ಅರೆಬರೆ ನಿಂತಿರುವ ಮಹತ್ವದ ಸೇತುವೆ ಕಾಮಗಾರಿಯ ಕಳಪೆತನ ಬಟಾ ಬಯಲಾಗಿದೆ.

ಹಾಸನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಚುರುಕು

Oct 26 2025, 02:00 AM IST
ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವು ಹಾಸನ ಜಿಲ್ಲೆಯ ಬಹು ನಿರೀಕ್ಷಿತ ಯೋಜನೆ. ಈ ಆಸ್ಪತ್ರೆ ಕಾರ್ಯ ನಿಂತುಹೋಗಿದ್ದರೂ ಈಗ ಎಲ್ಲಾ ಅಡಚಣೆಗಳು ನಿವಾರಣೆಯಾಗಿವೆ. ಶೀಘ್ರದಲ್ಲೇ ಹೊಸ ಟೆಂಡರ್‌ ಕರೆಯಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಳ್ಳಲಿದೆ. ಹಿಂದಿನ ಕಾಮಗಾರಿಗೆ ಬಿಲ್‌ಗಳು ಪಾವತಿಯಾಗದ ವಿಚಾರ ನನ್ನ ಗಮನಕ್ಕೆ ಬಂದಿದೆ. ಲೋಕಸಭಾ ಸದಸ್ಯರ ಮನವಿಯ ಮೇರೆಗೆ ತನಿಖೆ ನಡೆಸಿ, ವಿಷಯವನ್ನು ಸಚಿವ ಸಂಪುಟದ ಅನುಮೋದನೆಗೆ ತರಲಾಗಿದೆ. ಅದು ಈಗ ಪ್ರಕ್ರಿಯೆಯಲ್ಲಿದೆ. ಮುಂದಿನ ಹಂತದಲ್ಲಿ ಸ್ಥಳ ಪರಿಶೀಲನೆ ನಡೆಸಿ ಉಳಿದ ಕಾಮಗಾರಿಗಳ ಪಟ್ಟಿಯನ್ನು ತಯಾರು ಮಾಡಲಾಗುವುದು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 97
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved