ಟಿಎಪಿಸಿಎಂಎಸ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ

Oct 19 2025, 01:00 AM IST
ಚನ್ನರಾಯಪಟ್ಟಣ ತಾಲೂಕು ಟಿಎಪಿಸಿಎಂಎಸ್ ನಡೆಯುವ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೋಬಳಿ ವಿವಿಧಡೆ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಹಾಗೂ ಇತರರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಮಾಜಿ ಟಿಎಪಿಸಿಎಂಎಸ್ ಅಧ್ಯಕ್ಷ ಹಾಲಿ ಅಭ್ಯರ್ಥಿ ಕುಂಬಾರಹಳ್ಳಿ ರಮೇಶ್ ಮಾತನಾಡಿ, ಹಿಂದೆ ನಷ್ಟದಲ್ಲಿದ್ದ ಟಿಎಪಿಸಿಎಂಎಸ್ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಸಿಎನ್ ಮಂಜುನಾಥ್ ಅವರ ಸಹಕಾರದಿಂದ ಇಂದು ಪ್ರಸ್ತುತ ಲಾಭದಲ್ಲಿದೆ. ಮುಂಬರುವ ದಿನಗಳಲ್ಲೂ ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಲು ಪುನಃ ಜೆಡಿಎಸ್ ಪಕ್ಷದ ನಿರ್ದೇಶಕರು ಆಡಳಿತ ಮಂಡಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಗೊಂಡರೆ ಸಾಧ್ಯವಾಗುತ್ತದೆ ಎಂದರು.

ಜೆಡಿಎಸ್ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಬಳಕೆ

Oct 09 2025, 02:00 AM IST
ಅರಸೀಕೆರೆ ತಾಲೂಕಿನಲ್ಲಿ ಮಂಗಳವಾರ ನಡೆದ ಜೆಡಿಎಸ್ ಪಕ್ಷದ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಮತ್ತು ಟೋಪಿಯನ್ನು ಬಳಸಿರುವ ಘಟನೆಗೆ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ಯತೀಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಅವಿನಾಶ್ ನಾಯ್ಡು ಮಾತನಾಡಿ, ಸಂತೋಷ್ ಅವರ ಜೊತೆ ತಿರುಗಾಡುವ ಗಿರೀಶ್, ಶಿವನ್‌ ರಾಜ್ ಮುಂತಾದವರಿಗೆ ಈಗಾಗಲೇ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಮುಂದೆ ಯಾರೇ ಅವರ ಜೊತೆ ಭಾಗವಹಿಸಿದರೂ ಪಕ್ಷ ವಿರೋಧಿ ಕ್ರಮ ಕೈಗೊಳ್ಳಲಾಗುತ್ತದೆ. ಜೆಡಿಎಸ್‌ ಅವರಿಗೆ ತಮ್ಮ ಬೆಂಬಲ ಸಾಕಾಗದೇ, ನಮ್ಮ ಬಿಜೆಪಿ ಬಾವುಟವನ್ನು ಬಳಸಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಭಾಗವಹಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.