ಜಿಲ್ಲೆಯಲ್ಲಿನ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ದೇವೇಗೌಡರು ಕಾರಣ

Sep 23 2024, 01:17 AM IST
ಚನ್ನರಾಯಪಟ್ಟಣದಲ್ಲಿನ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಸಹಕಾರಿ ಕ್ಷೇತ್ರವು ಶೋಚನೀಯ ಸ್ಥಿತಿಯಲ್ಲಿದ್ದಾಗ ಮುಖ್ಯಮಂತ್ರಿಗಳಾಗಿದ್ದ ವೇಳೆ ಎಚ್.ಡಿ.ದೇವೇಗೌಡರವರು ೨ ಕೋಟಿ ರು. ಗಳನ್ನು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಪ್ರೋತ್ಸಾಹ ಧನವಾಗಿ ನೀಡಿದ ಫಲ ಇಂದು ೨ ಸಾವಿರ ಕೋಟಿ ರು. ಗಳ ವಹಿವಾಟನ್ನು ನಡೆಸುತ್ತಿದೆ. ಹಾಲು ಉತ್ಪನ್ನ ಸಹಕಾರ ಸಂಘಗಳು, ಕೃಷಿ ಪತ್ತಿನ ಸಹಕಾರ ಸಂಘಗಳು, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ, ಅತ್ಯುತ್ತಮವಾಗಿ ವಹಿವಾಟು ನಡೆಸುತ್ತಿವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.