ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಜೂ.30ರೊಳಗೆ ಶೇ.100ರಷ್ಟು ಪೂರ್ಣಗೊಳಿಸಿ, ಅನರ್ಹ ಪಡಿತರ ಫಲಾನುಭವಿಗಳನ್ನು ಗುರುತಿಸಿ ಅಂಥವರಿಗೆ ಹಂಚಿಕೆಯಾಗಿರುವ ಆಹಾರ ಧಾನ್ಯವನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ.
ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.
ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಪಡಿತರ ಚೀಟಿ ತಿದ್ದುಪಡಿ ( ಹೆಸರು ಬದಲಾವಣೆ, ಸದಸ್ಯರ ಸೇರ್ಪಡೆ ಮತ್ತು ಸದಸ್ಯರ ಹೆಸರು ತೆಗೆದು ಹಾಕುವುದು, ನ್ಯಾಯಬೆಲೆ ಅಂಗಡಿ ಬದಲಾವಣೆ ಮತ್ತು ವಿಳಾಸ ಬದಲಾವಣೆ) ಪ್ರಾರಂಭ
ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.