‘ಕೋಮು ಸೂಕ್ಷ್ಮ ಪ್ರದೇಶ’ ಬಿಂಬಿಸಲು ಕಾರ್ಯಪಡೆ ಅಲ್ಲ: ಪರಮೇಶ್ವರ್
Jun 16 2025, 12:58 AM ISTವಿಶೇಷ ಕಾರ್ಯಪಡೆಗೆ ಉಡುಪಿ ಜಿಲ್ಲೆಯ ಸೇರ್ಪಡೆ ವಿರೋಧಿಸಿ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಪಡೆಯ ಉಪಯೋಗ ಆಗದಿರುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕರಿಗೂ ನಾನು ಮನವಿ ಮಾಡಿದ್ದೇನೆ. ಕೋಮುವಾದಕ್ಕೆ ಸಂಬಂಧಪಟ್ಟ ಘಟನೆ ನಡೆಯದಿದ್ದಲ್ಲಿ ಈ ಕಾರ್ಯಪಡೆ ಅಗತ್ಯ ಬರುವುದಿಲ್ಲ. ಇದರ ಅಗತ್ಯ ಬರದಿದ್ದಲ್ಲಿ ಕೋಮುವಾದ ಸಂಪೂರ್ಣ ಹೋಗಿದೆ ಎಂಬ ಅರ್ಥವೇ ಬರುತ್ತದೆ ಎಂದರು.