ಶೀಘ್ರದಲ್ಲೇ ಪೌರ ಕಾರ್ಮಿಕರಿಗೆ ನಿವೇಶನ

Oct 11 2025, 12:02 AM IST
ಪೌರಕಾರ್ಮಿಕರ ಬಗ್ಗೆ ಸ್ವತಃ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅಪಾರವಾದ ಗೌರವವನ್ನು ತೋರಿದ್ದಾರೆ. ಕಾರ್ಮಿಕರು ಮಳೆ, ಗಾಳಿ, ಚಳಿ ಎನ್ನದೇ ನಸುಕಿನಲ್ಲಿ ಸ್ಚಚ್ಛ ಮಾಡುವ ಪೌರಕಾರ್ಮಿಕರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಅವರಿಗೆ ಸಲ್ಲಬೇಕಾದ ಸವಲತ್ತು ದೊರಕಬೇಕು. ಪೌರಕಾರ್ಮಿಕರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ, ಶ್ರದ್ಧೆಯಿಂದ ಮನಃಪೂರ್ವಕವಾಗಿ ಮಾಡುತ್ತಿದ್ದಾರೆ. ಚನ್ನಕೇಶವ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಆ ಸಂದರ್ಭದ ಸ್ವಚ್ಛತೆಗೊಳಿಸುವ ಕೀರ್ತಿ ಪೌರಕಾರ್ಮಿಕರಿಗೆ ಸಲ್ಲುತ್ತದೆ, ಪ್ರತಿವರ್ಷ ಪುರಸಭಾ ವತಿಯಿಂದ ಕಾರ್ಮಿಕರನ್ನ ಸನ್ಮಾನಿಸುತ್ತಿರುವುದು ಜನಮೆಚ್ಚುವ ಕೆಲಸವಾಗಿದೆ. ನಿವೇಶನ ನೀಡಲು ಮತ್ತು ನೀರು ಸರಬರಾಜುದಾರರಿಗೆ ಎಲ್ಲ ರೀತಿಯ ಸವಲತ್ತು ಕಲ್ಪಿಸಲು ಸದನದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.

ಪೌರ ಕಾರ್ಮಿಕರಿಗೆ ಸನ್ಮಾನಿಸಿದ ಶಾಸಕ ಬಾಲಕೃಷ್ಣ

Oct 04 2025, 12:00 AM IST
ಜನರು ಬೆಚ್ಚಗೆ ಮಲಗಿರುವ ಹೊತ್ತಿನಲ್ಲಿ ತಾವೆದ್ದು ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ಪಟ್ಟಣದ ಗರಿಮೆ ಹಿರಿಮೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಶ್ಲಾಘಿಸಿದರು. ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಃಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡುವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ. ನಿಮ್ಮ ಉತ್ತಮ ಆರೋಗ್ಯದಿಂದ ಪಟ್ಟಣದ ಉತ್ತಮ ಆರೋಗ್ಯ ಸಾಧ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.