ಕಾವೇರಿ ವನ್ಯಜೀವಿ ಧಾಮ, ಮಲೆಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ ಸಂಘರ್ಷ ತಡೆಗೆ ಆನೆ ಕಂದಕ, ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು 157 ಕೋಟಿ ರು. ಹೆಚ್ಚುವರಿಯಾಗಿ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ
ರಾಜ್ಯದಲ್ಲಿ ವನ್ಯಜೀವಿಗಳು ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವ ಪ್ರಕರಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 2023-24ಕ್ಕೆ ಹೋಲಿಸಿದರೆ 2024-25ರಲ್ಲಿ 15 ಸಾವಿರ ಪ್ರಕರಣಗಳು ಕಡಿಮೆಯಾಗಿವೆ.