ಸಂಸದ ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ಸಂಘ ಆಗ್ರಹ
Oct 22 2025, 01:03 AM ISTವಾಲ್ಮಿಕಿ ಸಮಾಜವನ್ನು ನಿಂದನೆ ಮಾಡಿದ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಪಟ್ಟಣದ ಆರಕ್ಷಕ ಠಾಣೆಗೆ ಮನವಿ ಸಲ್ಲಿಸಲಾಯಿತು. ತಾಲೂಕು ಉಪಾಧ್ಯಕ್ಷ ಕುಮಾರ ನಾಯಕ ಮಾತನಾಡಿ, ರಮೇಶ್ ಕತ್ತಿ ಅವರ ಹೇಳಿಕೆ ನಮ್ಮ ಸಮಾಜದ ಗೌರವಕ್ಕೆ ಹಾನಿ ಉಂಟುಮಾಡಿದೆ. ಸರ್ಕಾರವು ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಸರ್ಕಾರ ನಿರ್ಲಕ್ಷ್ಯ ತೋರಿದರೆ ರಾಜ್ಯವ್ಯಾಪಿ ವಾಲ್ಮೀಕಿ ಸಮಾಜದವರು ಬೃಹತ್ ಮಟ್ಟದ ಹೋರಾಟ ನಡೆಸುತ್ತಾರೆ ಎಂದು ಎಚ್ಚರಿಕೆ ನೀಡಿದರು.