ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಯುಯಾನ ತರಬೇತಿ ಸಂಸ್ಥೆ (ಎಫ್ಟಿಒ) ಸ್ಥಾಪನೆಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಯೋಜನೆ ರೂಪಿಸಿದೆ.
ಶಿವಮೊಗ್ಗ ಪ್ರೆಸ್ಟ್ರಸ್ಟ್ ಪಿ.ಲಂಕೇಶ್ ಹೆಸರಿನಲ್ಲಿ ಸ್ಥಾಪಿಸಿರುವ ಜೀವಮಾನದ ಸಾಧನೆಗಾಗಿ ನೀಡುವ ವಾರ್ಷಿಕ ಪ್ರಶಸ್ತಿ ಹಾಗೂ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಪ್ರಭ ಪತ್ರಿಕೆಯ ವಿಶೇಷ ವರದಿಗಾರ ಗೋಪಾಲ್ ಯಡಗೆರೆ ಸೇರಿದಂತೆ 5 ಮಂದಿಗೆ ಪ್ರಶಸ್ತಿ ಘೋಷಿಸಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಠ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.
ನನ್ನ ಹುಟ್ಟುಹಬ್ಬದ ನಿಮಿತ್ತ ಕುಬಟೂರು ನಿಂದ ಹಿಡಿದು ಶಿವಮೊಗ್ಗದವರಿಗೆ ದಾರಿಯಲ್ಲೆಡೆ ಜನರ ಹಾರೈಕೆ ಸಿಕ್ಕಿದೆ. ಜನರ ಅಭಿಮಾನದ ಹಿನ್ನೆಲೆ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.