ಪತ್ರಕರ್ತ ನರಸಿಂಹಮೂರ್ತಿ ಅಪಘಾತದ ಹಿಂದೆ ಸಂಚು ಶಂಕೆ; ಸಿಐಡಿ ತನಿಖೆ ನಡೆಸುವಂತೆ ಒತ್ತಾಯ
Sep 25 2025, 01:00 AM ISTಮೃತ ನರಸಿಂಹಮೂರ್ತಿಯವರು ವೃದ್ಧ ತಂದೆ- ತಾಯಿ, ಪತ್ನಿ, ಮೂರು ವರ್ಷದ ಮಗಳು ಹಾಗೂ ಕೇವಲ ಎಂಟು ತಿಂಗಳ ಮಗುವನ್ನು ಬಿಟ್ಟು ಅಗಲಿದ್ದಾರೆ. ಕುಟುಂಬಕ್ಕೆ ಏಕೈಕ ಆಧಾರವಾಗಿದ್ದವರ ಆಕಸ್ಮಿಕ ಅಗಲಿಕೆ ಅವರ ಕುಟುಂಬವನ್ನು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟಕ್ಕೆ ತಳ್ಳಿದೆ. ಪತ್ರಕರ್ತರ ಸಂಘ ಹಾಗೂ ನಾಗರಿಕರು ಜಿಲ್ಲಾಡಳಿತವನ್ನು ತಕ್ಷಣವೇ ಸ್ಪಂದಿಸುವಂತೆ ಆಗ್ರಹಿಸಿ ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ಧನ ಬಿಡುಗಡೆ ಮಾಡಬೇಕು. ಮೃತರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.