ಹಾಸನಾಂಬೆ ದರ್ಶನ, ಹಾಸನ, ಸಿಎಂ ಸಿದ್ಧರಾಮಯ್ಯ ಶ್ರೀ ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದು ಉತ್ತಮ ಮಳೆ ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಹೋರಾಟಕ್ಕೆ ನಿರ್ಧರಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಎನ್ಡಿಎಯೇತರ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಮುಖ್ಯಸ್ಥರಿಗೆ ಪತ್ರ ಬರೆದು ಬೆಂಬಲಯಾಚಿಸಿದ್ದಾರೆ.
ಸಮರ್ಥ ನಾಯಕ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾ.7ಕ್ಕೆ ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ. ಅವರ ಲೆಕ್ಕಾಚಾರದ ಬಗ್ಗೆ ರಾಜ್ಯದ ಜನರ ಚಿತ್ತ ನೆಟ್ಟಿದ್ದು, ಈ ಬಜೆಟ್ನಲ್ಲಿ ಯಾರ್ಯಾರಿಗೆ ಏನೇನು ಕೊಡುಗೆ ಕೊಡಬಹುದು ಎಂದು ನಿರೀಕ್ಷೆ ಹೊತ್ತುಕೊಂಡಿದ್ದಾರೆ.
ಭಾರತದಲ್ಲಿ ಇವಿಎಂ ಯಂತ್ರದ ಬದಲು ಮರಳಿ ಬ್ಯಾಲೆಟ್ ಪೇಪರ್ ತರಬೇಕು ಎಂಬ ಕಾಂಗ್ರೆಸ್ ಬೇಡಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಬು ನೀಡಿದ್ದಾರೆ. ಇವಿಎಂ ಬದಲು ಬ್ಯಾಲೆಟ್ ಪೇಪರ್ಗೆ ಹೋಗುವುದು ಒಳ್ಳೆಯದು’ ಎಂದು ಹೇಳಿವ ಮೂಲಕ ಇವಿಎಂ ಬಗ್ಗೆ ತಮ್ಮ ಅಸಮ್ಮತವನ್ನು ವ್ಯಕ್ತಪಡಿಸಿದ್ದಾರೆ.
ಸಿದ್ಧರಾಮಯ್ಯನವರು ಮೀರ್ ಸಾಧಿಕ್ ಮತ್ತು ಮಲ್ಲಪ್ಪಶೆಟ್ಟಿ ಹೋಲಿಕೆ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.