ಯಗಚಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

May 01 2025, 12:46 AM IST
ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಒತ್ತಾಸೆಯಿಂದಾಗಿ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 35 ಕೋಟಿ ರು. ಅನುದಾನ ಮೀಸಲಿಡಲಾಗಿದೆ. ವಿಶ್ವವಿಖ್ಯಾತ ಸ್ಥಳ ಇದಾಗಿದ್ದು ಇಂದು ತಾಂತ್ರಿಕ ಸಮಿತಿ ಅಧ್ಯಕ್ಷ ಜಯಪ್ರಸಾದ್ ಅವರ ನೇತೃತ್ವದ ತಂಡ ಸ್ಥಳಕ್ಕೆಬಂದು ಪರಿಶೀಲನೆ ನಡೆಸಿದೆ. ಚತುಷ್ಪಥ ರಸ್ತೆಗೆ ಅನುಗುಣವಾಗಿ ಸೇತುವೆ ನಿರ್ಮಿಸಲಾಗುವುದು. ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತರ ಕೆಲಸ ಆರಂಭಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಿಂತ ಉತ್ತಮ ರೀತಿಯಲ್ಲಿ ನಿರ್ಮಿಸಲಾಗುವುದು. ಹೊಳೆಬೀದಿ ಸರ್ಕಾರಕ್ಕೆ ಸೇರಿದ 93 ಅಡಿ ರಸ್ತೆ ಇದ್ದು ಅಲ್ಪಸ್ವಲ್ಪ ಒತ್ತುವರಿ ಇದ್ದರೂ ಬಿಟ್ಟುಕೊಡಲಿದ್ದಾರೆ. ಎಲ್ಲರ ಸಹಕಾರ ಮುಖ್ಯ.