ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟವನ್ನು ‘ಭಯೋತ್ಪಾದಕ ಕೃತ್ಯ’ ಎಂದು ಮೊದಲ ಬಾರಿ ಕರೆದಿರುವ ಕೇಂದ್ರ ಸರ್ಕಾರ, ಅಪರಾಧಿಗಳು ಮತ್ತು ಅವರ ಪ್ರಾಯೋಜಕರನ್ನು ಹೆಡೆಮುರಿ ಕಟ್ಟಲು ಅತ್ಯಂತ ತುರ್ತು ಮತ್ತು ವೃತ್ತಿಪರತೆಯಿಂದ ಕೆಲಸ ಮಾಡುವಂತೆ ತನಿಖಾ ಸಂಸ್ಥೆಗಳಿಗೆ ಬುಧವಾರ ತಾಕೀತು ಮಾಡಿದೆ.