• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ ದುರಂತ : ಸಂತ್ರಸ್ತರ ಮನೆಗೆ ಎಚ್‌ಡಿಡಿ ಭೇಟಿ

Sep 15 2025, 01:00 AM IST
ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದ ಸ್ಥಳಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಹಾಸನ ಜಿಲ್ಲೆಗೂ ರಂಗಾಯಣದ ಅಗತ್ಯವಿದೆ

Sep 15 2025, 01:00 AM IST
ಹಾಸನ ಜಿಲ್ಲೆಯಲ್ಲಿ ರಂಗಾಯಣ ರಚನೆಯಾದರೆ ಈ ಭಾಗದ ಕಲಾವಿದರಿಗೆ ಪ್ರೋತ್ಸಾಹ ದೊರೆತಂತಾಗುತ್ತದೆ. ಮೂಡಲಪಾಯ ಯಕ್ಷಗಾನ ತರಬೇತಿ ಎರಡು ತಿಂಗಳ ಕಾಲ ನಡೆಯಲಿದ್ದು ೧೫ಕ್ಕೂ ಹೆಚ್ಚು ಪ್ರಕಾರಗಳು ಇಲ್ಲಿದೆ. ಅವುಗಳ ಪುನಶ್ವೇತನ ಆಗಬೇಕಾಗಿದೆ. ತಮ್ಮ ತಂಡ ೩೫ ವರ್ಷಗಳಿಂದ ಈ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದು ಅನೇಕ ಯುವ ಕಲಾವಿದರನ್ನು ಬೆಳೆಸಲಾಗುತ್ತಿದೆ. ನಮ್ಮಲ್ಲಿ ಉತ್ಸಾಹವಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕೆಂದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಂಗಾಯಣ, ಕಾರ್ಯನಿರ್ವಹಿಸುತ್ತಿತ್ತು. ಹಾಸನ ಜಿಲ್ಲೆಗೆ ಮೂಡಲಪಾಯ ರಂಗಾಯಣ ಅಗತ್ಯವಿದೆ ಎಂದರು.

ಹಾಸನ ಗಣಪತಿ ಮೆರವಣಿಗೆ ದುರಂತ : ಬೆಳ್ತಂಗಡಿ ಕೀಲು ಗೊಂಬೆ ತಂಡ ಪಾರು

Sep 14 2025, 01:05 AM IST
ಬೆಳ್ತಂಗಡಿಯ ಗಿರೀಶ್‌ ಶೆಟ್ಟಿ ಮಾಲೀಕತ್ವದ ಶೆಟ್ಟಿ ಆರ್ಟ್ಸ್‌ ಕಲಾ ತಂಡದ 17 ಮಂದಿ ಕಲಾವಿದರು ಈ ಗಣೇಶೋತ್ಸವ ಮೆರವಣಿಗೆಯಲ್ಲಿ ಕೀಲು ಗೊಂಬೆಯಲ್ಲಿ ಪಾಲ್ಗೊಂಡಿದ್ದರು. ಈ ಎಲ್ಲ ಕಲಾವಿದರು ಯಕ್ಷಗಾನ, ಕೀಲು ಕುದುರೆ ಸಹಿತ ವಿವಿಧ ಗೊಂಬೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದರು.

ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ

Sep 14 2025, 01:04 AM IST
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಹಾಸನ ದುರಂತ ಸ್ಥಳಕ್ಕೆ ಉಸ್ತುವಾರಿ ಕೃಷ್ಣಬೈರೇಗೌಡ ಭೇಟಿ, ಪರಿಶೀಲನೆ

Sep 14 2025, 01:04 AM IST
ಮೃತಪಟ್ಟಿರುವವರು, ಗಾಯಾಳುಗಳ ಪೈಕಿ ಅನೇಕರು ವಿದ್ಯಾರ್ಥಿಗಳು, ಯುವಕರು, ವಯಸ್ಸಾಗಿರುವಂತಹವರು, ಕುಟುಂಬದಲ್ಲಿ ಯಜಮಾನ ಸ್ಥಾನದಲ್ಲಿ ಇರುವಂತವರು ಆಗಿರುವುದರಿಂದ ಅವರ ಕುಟುಂಬದವರು ತಕ್ಷಣ ಚೇತರಿಸಿಕೊಳ್ಳಲು ಮುಖ್ಯಮಂತ್ರಿಯವರು ಸರ್ಕಾರದಿಂದ ೫ ಲಕ್ಷ ರು.ಗಳ ಪರಿಹಾರ ಮೊತ್ತ ಘೋಷಿಸಿದ್ದಾರೆ. ಅದನ್ನು ಇಂದೇ ತಲುಪಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದ್ದೇನೆ. ಸ್ಥಳೀಯ ಜನ ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ವಿಷಯ ಕುರಿತಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.

ಹುಟ್ಟಿದ ದಿನವೇ ಹಾಸನ ಅವಘಡದಲ್ಲಿ ಉಸಿರು ಚೆಲ್ಲಿದ ಹೊಸದುರ್ಗ ಯುವಕ

Sep 14 2025, 01:04 AM IST
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನೆ ವೇಳೆ ನಡೆದ ಅವಘಡದಲ್ಲಿ ಇಲ್ಲಿಯ ಎಂಜಿನಿಯರ್‌ ಓದುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಯುವಕನಿಗೆ ಅಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಆ ದಿನವೇ ಯುವಕ ಉಸಿರು ನಿಲ್ಲಿಸಿರುವ ದಾರುಣ ಸಂಗತಿ ಬೆಳಕಿಗೆ ಬಂದಿದೆ.

ಹಾಸನ ದುರಂತ ಹೃದಯವಿದ್ರಾವಕ : ಮೋದಿ ಕಂಬನಿ-ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

Sep 14 2025, 01:04 AM IST
ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ

Sep 13 2025, 05:06 AM IST

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಂಡುಕೇಳರಿಯದ ದುರಂತವೊಂದು ಹಾಸನದಲ್ಲಿ ಸಂಭವಿಸಿದೆ. ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆಗೆ ತೆರಳುತ್ತಿದ್ದ ಜನರ ಗುಂಪಿನ ಮೇಲೆ ಮಿನಿ ಕಂಟೇನರ್‌ ಲಾರಿಯೊಂದು ಹರಿದಿದ್ದು, ಸ್ಥಳದಲ್ಲೇ 8 ಮಂದಿ ಸಾವಿಗೀಡಾಗಿದ್ದಾರೆ

ಇಂದು ಮಧ್ಯರಾತ್ರಿಯಿಂದಲೇ ನೆಲಮಂಗಲ-ಹಾಸನ ಟೋಲ್ ದರ ಹೆಚ್ಚಳ

Sep 01 2025, 01:03 AM IST
ದಾಬಸ್‍ಪೇಟೆ: ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸೆಪ್ಟೆಂಬರ್ 1ರಿಂದ ಟೋಲ್ ದರ ಏರಿಕೆ ಮಾಡಿ, ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದೆ.

ಕರವೇ ಹಾಸನ ತಾಲೂಕು ಪದಾಧಿಕಾರಿಗಳ ಪದಗ್ರಹಣ

Aug 25 2025, 01:00 AM IST
ಕರ್ನಾಟಕ ರಕ್ಷಣಾ ವೇದಿಕೆ ಹಾಸನ ತಾಲೂಕು ಘಟಕದಿಂದ ಪದಾಧಿಕಾರಿಗಳ ಪದಗ್ರಹಣ ಹಾಗೂ ಹೋಬಳಿ ಅಧ್ಯಕ್ಷ, ಹೋಬಳಿ ಪದಾಧಿಕಾರಿಗಳ ಸಭೆ ಯಶಸ್ವಿಯಾಗಿ ಜರುಗಿತು. ಕರವೇ ಜಿಲ್ಲಾಧ್ಯಕ್ಷರಾದ ಸಿ.ಡಿ. ಮನುಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರವೇ ತಾಲೂಕು ಅಧ್ಯಕ್ಷ ಶಿವಣ್ಣಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರವೇ ಶಾಂತಿಗ್ರಾಮ ಹೋಬಳಿ ಅಧ್ಯಕ್ಷರಾಗಿ ಚೇತನ್, ಕಟ್ಟಾಯ ಹೋಬಳಿ ಅಧ್ಯಕ್ಷ ರವಿ, ದುದ್ದ ಹೋಬಳಿ ಅಧ್ಯಕ್ಷ ಪೃಥ್ವಿ, ಸಾಲಗಾಮೆ ಹೋಬಳಿ ಅಧ್ಯಕ್ಷರಾಗಿ ಸುದರ್ಶನ್, ಹಾಸನ ಕಸಾಬ ಅಧ್ಯಕ್ಷರಾಗಿ ಮಧು ಹಾಗೂ ತಾಲೂಕು ಪ್ರಧಾನ ಕಾರ್ಯದರ್ಶಿ ಶಶಾಂಕ್, ಸಂಘಟನ ಕಾರ್ಯದರ್ಶಿ ತಶ್ವಿನ್ ಗೌಡ ಇತರರ ಪದಗ್ರಹಣ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved