• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನಾಂಬೆ ಅಕ್ಕ ಕೆಂಚಾಂಬಿಕೆ ಜಾತ್ರೋತ್ಸವ ಸಂಪನ್ನ

Oct 30 2025, 01:45 AM IST
ಹಾಸನಾಂಬೆ ದೇವಿ ಸೇರಿ ಒಟ್ಟು ಏಳು ಜನ ಸಹೋದರಿಯರಲ್ಲಿ ಹಿರಿಯಳಾದ ಕೆಂಚಾಂಬೆ (ಬ್ರಾಹ್ಮದೇವಿ) ಹರಿಹಳ್ಳಿಯಲ್ಲಿ ನೆಲೆಸಿದ್ದಾಳೆ. ಹಾಸನಾಂಬೆ ದೇವಸ್ಥಾನದ ಬಾಗಿಲು ಹಾಕಿದ ಮರುದಿನ ಕೆಂಚಾಂಬಿಕೆ ದೇವಿ ಜಾತ್ರೆ ಉತ್ಸವಾದಿಗಳು ಪ್ರಾರಂಭವಾಗುತ್ತವೆ. ದೇವಸ್ಥಾನದ ಪ್ರಧಾನ ಅರ್ಚಕ ಎಚ್.ಎನ್. ರಾಮಸ್ವಾಮಿ ಕುಟುಂಬ ಸದಸ್ಯರಾದ ಸತ್ಯನಾರಾಯಣ್ ಹಾಗೂ ವ್ಯವಸ್ಥಾಪನಾ ಸಮಿತಿ ಮಂಡಳಿಯ ಅಧ್ಯಕ್ಷ ಗೋಪಾಲ (ರಘು) ಸೇರಿದಂತೆ ಆಡಳಿತ ಮಂಡಳಿ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ನಾಳೆಯಿಂದ ಹಾಸನಾಂಬೆ ಹಿರಿಯಕ್ಕ ಕೆಂಚಾಂಬಿಕೆ ಜಾತ್ರೆ

Oct 25 2025, 01:00 AM IST
ಸಪ್ತಮಾತೃಕೆಯರಲ್ಲಿ ಹಿರಿಯರಾದ ಕೆಂಚಾಂಬಿಕೆಯ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲದೆ ಇರುವ ಕಾರಣ, ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಯುವ ಇಲ್ಲಿನ ಜಾತ್ರಾ ಮಹೋತ್ಸವ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದಷ್ಟು ಜನಮನ್ನಣೆ ಪಡೆದಿಲ್ಲ. ಸಪ್ತಮಾತ್ರಕ್ಕೆಯರಾದ ಬ್ರಾಹ್ಮಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ, ಚಾಮುಂಡಿ ಇವರಲ್ಲಿ ಹಿರಿಯರಾದ ಬ್ರಾಹ್ಮಿ ದೇವಿ ತಾಲೂಕಿನ ಹರಿಹಳ್ಳಿಯಲ್ಲೂ ವೈಷ್ಣವಿ, ಮಹೇಶ್ವರಿ, ಕೋಮಾರಿಯರು ಹಾಸನಾಂಬೆ ದೇಗುಲದಲ್ಲೂ ವಾರಾಹಿ, ಇಂದ್ರಾಣಿ, ಚಾಮುಂಡೀಯರು ಹಾಸನದ ದೇವಿಗೆರೆಯಲ್ಲೂ ಪೂಜಿಸಲ್ಪಡುತ್ತಾರೆ.

2025ರ ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

Oct 24 2025, 01:00 AM IST
ಅಕ್ಟೋಬರ್ 9ರಂದು ಬಾಗಿಲು ತೆರೆಯುವ ಮೂಲಕ ಆರಂಭವಾದ ಹಾಸನಾಂಬ ದೇವಿಯ ದರ್ಶನವು ದೀಪಾವಳಿಯ ಮರುದಿನ, ಗುರುವಾರ ಶಾಸ್ತ್ರೋಕ್ತವಾಗಿ ಕೊನೆಗೊಂಡಿತು.

ದಾಖಲೆ ಪ್ರಮಾಣದಲ್ಲಿ ಹಾಸನಾಂಬೆ ದೇವಿ ದರ್ಶನ

Oct 24 2025, 01:00 AM IST
ಈ ಬಾರಿ 26.13 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದ 9.68 ಕೋಟಿ ಆದಾಯ ಬಂದಿತ್ತು ಎಂದರು. ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ಯಶಸ್ವಿಯಾಗಿದ್ದು, ಇದಕ್ಕೆ ಸಹಕಾರ ನೀಡಿದ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು, ಎನ್ ಸಿಸಿ ಹಾಗೂ ಸ್ಕೌಟ್ ಮತ್ತುಗೈಡ್ಸ್ ವಿದ್ಯಾರ್ಥಿಗಳಿಗೂ ಸಹ ಧನ್ಯವಾದ ತಿಳಿಸಿದರು.

ಈ ವರ್ಷದ ಹಾಸನಾಂಬೆ ದರ್ಶನೋತ್ಸವಕ್ಕೆ ಗುರುವಾರ ತೆರೆ

Oct 24 2025, 01:00 AM IST
ಗಣ್ಯರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 1.05ಕ್ಕೆ ೧೫ ದಿನದಿಂದ ನಡೆದ ಜಾತ್ರಾ ಮಹೋತ್ಸವಕ್ಕೆ ಗುರುವಾರದಂದು ಗರ್ಭಗುಡಿ ಬಾಗಿಲು ಮುಚ್ಚಿ ಬೀಗ ಹಾಕುವ ಮೂಲಕ ೨೦೨೫ರ ಹಾಸನಾಂಬ ಉತ್ಸವಕ್ಕೆ ತೆರೆ ಎಳೆಯಲಾಯಿತು. ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಹಾಕುವ ವೇಳೆ ಕೆಲ ಸಮಯದಲ್ಲಿ ನೆರೆದಿದ್ದ ಕರ್ತವ್ಯನಿರತ ಸಿಬ್ಬಂದಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬೆಳಗ್ಗೆ ಪೂಜೆ, ನೈವೇದ್ಯಕ್ಕಾಗಿ ಸಾರ್ವಜನಿಕ ದರ್ಶನ ಬಂದ್ ಆಗಿದ್ದರಿಂದ ಸಾವಿರಾರು ಭಕ್ತರು ದರ್ಶನ ಸಾಧ್ಯವಾಗದೇ ನಿರಾಸೆಗೊಂಡು ವಾಪಸ್ ಹೋಗಬೇಕಾಯಿತು.

ಹಾಸನಾಂಬೆ ದರ್ಶನಕ್ಕೆ ನಿನ್ನೆಯೂ ಜನಸಾಗರ

Oct 21 2025, 01:00 AM IST

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ಹಾಸನಾಂಬ ಜಾತ್ರಾ ಮಹೋತ್ಸವದ 11ನೇ ದಿನವಾದ ಸೋಮವಾರ ದೇಗುಲಕ್ಕೆ ಭಕ್ತಸಾಗರ ಹರಿದು ಬಂದಿದ್ದು, ಸಾವಿರಾರು ಜನರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ರಾಜಕಾರಣಿಗಳು, ಚಲನಚಿತ್ರರಂಗದ ಗಣ್ಯರು ಸಹ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಹಾಸನಾಂಬೆ ದರ್ಶನ ಪಡೆದ ನಟ ವಿಜಯ್‌ ರಾಘವೇಂದ್ರ

Oct 21 2025, 01:00 AM IST
ಖ್ಯಾತ ನಟ ವಿಜಯರಾಘವೇಂದ್ರ ಹಾಗೂ ನಿರ್ಮಾಪಕ ಸಾ.ರಾ. ಗೋವಿಂದ್ ಅವರು ಸೋಮವಾರ ಹಾಸನಾಂಬೆ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೂರದೂರಿನಿಂದ ಸಾವಿರಾರು ಭಕ್ತರು ಇಲ್ಲಿ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ವ್ಯವಸ್ಥೆ ಅಚ್ಚುಕಟ್ಟಾಗಿ, ಶಿಸ್ತಿನ ರೀತಿಯಲ್ಲಿ ನಡೆದಿದೆ. ಎಲ್ಲರಿಗೂ ದರ್ಶನದ ಅವಕಾಶ ದೊರೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರೂ ದೇವಿಯ ಆಶೀರ್ವಾದದಿಂದ ಆರೋಗ್ಯ, ಸುಖ, ಶಾಂತಿ ಹಾಗೂ ಸಮೃದ್ಧಿ ಹೊಂದಲಿ ಎಂಬುದು ನನ್ನ ಪ್ರಾರ್ಥನೆ ಎಂದರು.

ಹಾಸನಾಂಬೆ ದರ್ಶನ ಪಡೆದ ಶಿವರಾಜಕುಮಾರ್ ದಂಪತಿ

Oct 20 2025, 01:02 AM IST

ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್‌ ಅವರು ಪತ್ನಿ ಗೀತಾ ಶಿವರಾಜಕುಮಾರ್‌ ಅವರೊಂದಿಗೆ ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ತಾಯಿ ಹಾಸನಾಂಬೆಯ ದರ್ಶನ ಪಡೆದು ಪುನೀತರಾದರು 

ಹಾಸನಾಂಬೆ ದರ್ಶನ ಪಡೆದ ರಿಷಬ್‌ ಶೆಟ್ಟಿ

Oct 20 2025, 01:02 AM IST

ಕಾಂತಾರ ಸಿನಿಮಾದ ಮೂಲಕ ದಾಖಲೆ ನಿರ್ಮಿಸಿದ ನಾಯಕ ನಟ ರಿಷಬ್ ಶೆಟ್ಟಿ ದಂಪತಿಗಳು ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದೇ ವೇಳೆ ಶ್ರೀ ಸಿದ್ದೇಶ್ವರ ದೇವಾಲಯಕ್ಕೂ ತೆರಳಿದರು. 

ಹಾಸನಾಂಬೆ ದರ್ಶನಕ್ಕೆ ಹತ್ತನೇ ದಿನವೂ ಭಕ್ತಸಾಗರ

Oct 19 2025, 01:00 AM IST
ಹಾಸನಾಂಬೆ ದೇವಿ ಸಾರ್ವಜನಿಕ ದರ್ಶನದ ಹತ್ತನೇ ದಿನವಾದ ಶನಿವಾರ ಹಾಸನ ನಗರವು ಭಕ್ತರ ಮಹಾಸಾಗರದಿಂದ ತುಂಬಿಹೋಗಿತ್ತು. ಬೆಳಿಗ್ಗೆ ಮೂರು ಗಂಟೆಯಿಂದಲೇ ಸಾವಿರಾರು ಭಕ್ತರು ಧರ್ಮ ದರ್ಶನ ಮತ್ತು ವಿಶೇಷ ದರ್ಶನ ಸಾಲಿನಲ್ಲಿ ಸತತ ಹತ್ತು ಗಟೆಗಳಂ ಕಾಲ ನಿಂತು ದೇವಿಯ ದರ್ಶನ ಪಡೆದರು. ದೇವಾಲಯ ಸಮಿತಿಯ ಆಡಳಿತಾಧಿಕಾರಿ ಮಾರುತಿ ಅವರು, ಸಚಿವರು ಸ್ವತಃ ಹಾಜರಿಲ್ಲದಿದ್ದರೆ ಅವರ ಕುಟುಂಬ ಸದಸ್ಯರಿಗೂ ಪ್ರತ್ಯೇಕ ದರ್ಶನಕ್ಕೆ ಅವಕಾಶವಿಲ್ಲ. ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ಸೂಚನೆಯಂತೆ ಈ ನಿಯಮ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಕೆಲವೇ ತಿಂಗಳಲ್ಲಿ ರಾಜಕೀಯ ಕ್ರಾಂತಿ : ಎಚ್‌ಡಿಕೆ
ಸಿದ್ದುಗಾಗಿ 3 ಸಲ ಸೋನಿಯಾ ಮನೆಗೆ ಹೋಗಿದ್ದೆ : ಎಚ್‌.ಡಿ.ದೇವೇಗೌಡ
ಸಿಎಂ, ಡಿಸಿಎಂ, ಖರ್ಗೆ ಮನೆಗೆ ಶಾಸಕರ ದಂಡು
ಜೀವಿತಾವಧಿ ದುಡಿದ ದುಡ್ಡಲ್ಲಿ ಮಕ್ಕಳಿಗೆ ಗ್ರಂಥಾಲಯ
ಮೀನುಗಾರಿಕಾ ವಿವಿ ಸ್ಥಾಪಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved