• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನಾಂಬೆ ದರ್ಶನ ಪಡೆದ ನೂತನ ಡೀಸಿ ಲತಾಕುಮಾರಿ

Jun 19 2025, 11:49 PM IST
ನೂತನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಕಚೇರಿಗೆ ಬರುವುದಕ್ಕೂ ಮೊದಲು ನಗರದಲ್ಲಿರುವ ಅಧಿದೇವತೆ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ತಮ್ಮ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು. ನೂತನ ಡೀಸಿ ಕೆ.ಎಸ್. ಲತಾಕುಮಾರಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ತಂದೆ- ತಾಯಿ ಅವರ ಉಪಸ್ಥಿತಿಯಲ್ಲಿ ಉನ್ನತ ಹುದ್ದೆಯ ಅಧಿಕಾರ ಸ್ವೀಕರಿಸಿರುವುದು ತುಂಬ ಸಂತೋಷ ತಂದಿದೆ. ತಂದೆ ಅವರಿಂದ ಹಸಿರು ಇಂಕಿನ ಪೆನ್ನು ಪಡೆದು ಸಿಟಿಸಿಗೆ ಸಹಿ ಮಾಡಿದ್ದು, ನಾನು ಉನ್ನತ ಹುದ್ದೆಗೇರುವುದು ನಮ್ಮ ತಂದೆ ಅವರ ಕನಸ್ಸಾಗಿತ್ತು ಎಂದು ತಿಳಿಸಿದರು.

ಹಾಸನಾಂಬೆ ಜಾತ್ರೋತ್ಸವದ ಹುಂಡಿ ಎಣಿಕೆ ಕಾರ್ಯ

Nov 05 2024, 12:38 AM IST
ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ೧೦೦೦ ರು. ಬೆಲೆಯ ಟಿಕೆಟ್ ಆನ್‌ಲೈನ್ ಮೂಲಕ ರು. ೨೫,೬೭,೭೯೦, ಸ್ಥಳದಲ್ಲೇ ಪಡೆದ ಟಿಕೆಟ್ ೭,೧೬,೦೧,೦೦೦ ರು, ಒಟ್ಟು ೭,೪೧,೬೮,೭೯೦ ಹಾಗೂ ೩೦೦ ರು. ಟಿಕೆಟ್ ಆನ್‌ಲೈನ್ ಮೂಲಕ ರು.೬,೮೪,೪೩೮, ಸ್ಥಳದಲ್ಲೇ ಪಡೆದ ಟಿಕೆಟ್ ರು. ೧,೭೪,೪೨,೬೦೦, ಒಟ್ಟು ೧,೮೧,೨೭,೦೩೮ ರುಪಾಯಿ ಆದಾಯ ಬಂದಿದೆ. ೫೧ ಗ್ರಾಂ ಚಿನ್ನ, ೯೧೩ ಗ್ರಾಂ. ಬೆಳ್ಳಿಯನ್ನು ಕಾಣಿಕೆ ಹುಂಡಿಗೆ ಹಾಕಿದ್ದಾರೆ.

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

Nov 04 2024, 12:35 AM IST
ಈ ಬಾರಿ ಅ.24ರಿಂದ ಆರಂಭವಾದ ಹಾಸನಾಂಬ ಜಾತ್ರೋತ್ಸವ ಹನ್ನೊಂದನೇ ದಿನವಾದ ಭಾನುವಾರ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 12.34ಕ್ಕೆ ಬಾಗಿಲು ಮುಚ್ಚುವ ಮೂಲಕ ೨೦೨೪ರ ದರ್ಶನೋತ್ಸವಕ್ಕೆ ತೆರೆ ಎಳೆಯಲಾಯಿತು. ಈ ವರ್ಷ ೨೦ಲಕ್ಷಕ್ಕೂ ಹೆಚ್ಚು ಜನ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುವ ಮೂಲಕ ದಾಖಲೆ ಬರೆದಂತಾಗಿದೆ. ಮುಂದಿನ ವರ್ಷ ಅಕ್ಟೋಬರ್‌ ೯ರಿಂದ ಅಕ್ಟೋಬರ್ ೨೩ರವರೆಗೂ ಇರುತ್ತದೆ

ಹಾಸನಾಂಬೆ ದರ್ಶನ ಮುಗಿಸಿ ಹೋಗುವಾಗ ಅಪಘಾತದಲ್ಲಿ ತಂದೆ ಮಗಳು ಸಾವು

Nov 02 2024, 01:22 AM IST
ಹಾಸನಾಂಬೆ ದರ್ಶನ ಮುಗಿಸಿಕೊಂಡು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಶ್ರೀ ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆ ಸಮೀಪ ಗುರುವಾರ ನಡುರಾತ್ರಿ ನಡೆದಿದೆ. ಆಲೂರು ತಾಲೂಕಿನ ಪಾಳ್ಯ ಸಮೀಪದ ಎಂ.ಎಚ್.ಪುರದ ನಿವಾಸಿ ಕುಮಾರ್(40) ಹಾಗೂ ಕಾವ್ಯ(12) ಸ್ಥಳದಲ್ಲೇ ಮೃತಪಟ್ಟಿದ್ದು, ಕುಮಾರ್‌ ಅವರ ತಾಯಿ ಪುಟ್ಟಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ.

7- 8 ಗಂಟೆ ಕಾದರೂ ದರ್ಶನ ಸಿಗದ ಹಿನ್ನೆಲೆ : ಹಾಸನಾಂಬೆ ದರ್ಶನದ ಎಲ್ಲ ಪಾಸ್‌ಗಳೂ ರದ್ದು

Nov 01 2024, 10:03 AM IST

ಭಕ್ತರ ಆಕ್ರೋಶ, ಗದ್ದಲಕ್ಕೆ ಮಣಿದ ಜಿಲ್ಲಾಡಳಿತ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲಕ್ಕೆ ಎಲ್ಲಾ ರೀತಿಯ ವಿಶೇಷ ಪಾಸುಗಳನ್ನು ರದ್ದುಪಡಿಸಿ ಧರ್ಮ ದರ್ಶನಕ್ಕಷ್ಟೇ ಅವಕಾಶ ನೀಡಿದೆ.

ಹಾಸನಾಂಬೆ ದೇವಸ್ಥಾನ ಡಿಸಿ ಆಸ್ತಿನಾ, ಹೇಳೋರು ಕೇಳೋರು ಯಾರೂ ಇಲ್ವಾ : ಮಾಜಿ ಸಚಿವ ಎಚ್.ಡಿ. ರೇವಣ್ಣ

Nov 01 2024, 12:07 AM IST

ಹೇಳೋರೋ, ಕೇಳೋರು ಯಾರೂ ಇಲ್ಲ ಈ ಜಿಲ್ಲೆಯಲ್ಲಿ. ಎರಡೂವರೆ ಲಕ್ಷ ಪಾಸ್ ಯಾಕೆ ಕೊಟ್ಟಿದ್ದೀರಾ! ದೇವಸ್ಥಾನವೇನು ಡಿಸಿ ಮನೆ ಆಸ್ತಿನಾ..ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ಸಿಟ್ಟನ್ನು ಹೊರ ಹಾಕಿದಲ್ಲದೇ ಬೇಸರ ವ್ಯಕ್ತಪಡಿಸಿದರು.

ಮುಂದಿನ ವರ್ಷ ವ್ಯವಸ್ಥಿತವಾಗಿ ಹಾಸನಾಂಬೆ ಜಾತ್ರೆ

Nov 01 2024, 12:07 AM IST
ಮುಂದಿನ ವರ್ಷದಲ್ಲಿ ಹಾಸನಾಂಬ ಜಾತ್ರೆಯನ್ನು ಇನ್ನೂ ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ಮಾಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಹೇಳಿದರು. ಜನರು ಆತ್ಮವಿಶ್ವಾಸ, ನಂಬಿಕೆಯಿಂದ ಹಿಂದೂ ಸಂಪ್ರದಾಯದಂತೆ ಭಕ್ತಿ ಇಟ್ಟುಕೊಂಡಿದ್ದಾರೆ. ರಾಜ್ಯ ಅಲ್ಲದೆ ಪಕ್ಕದ ರಾಜ್ಯದಿಂದಲೂ ಸಹಸ್ರಾರು ಭಕ್ತರು ಆಗಮಿಸಿ ಹಾಸನಾಂಬ ದರ್ಶನ ಪಡೆಯುತ್ತಿದ್ದಾರೆ ಎಂದರು. ವಿಶೇಷವಾಗಿ ಮಹಿಳೆಯರು ಮಕ್ಕಳೊಂದಿಗೆ ಸಾಲಿನಲ್ಲಿ ನಿಂತು ದರ್ಶನ ಪಡೆಯುವುದು ನೋಡಿಕೊಂಡು ಬಂದೆ. ಈ ಬಾರಿ ಮೂರು ಪಟ್ಟು ಜನ ಬಂದಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದರು.

ಹಾಸನಾಂಬೆ ದರ್ಶನಕ್ಕೆ ನಗರಸಭೆ ಸದಸ್ಯರ ಕಡೆಗಣನೆಗೆ ಸದಸ್ಯರ ಆಕ್ರೋಶ

Oct 31 2024, 12:53 AM IST
ಹಾಸನಾಂಬ ಜಾತ್ರೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಹಲವು ವರ್ಷಗಳಿಂದ ನಗರಸಭೆ ಚುನಾಯಿತ ಪ್ರತಿನಿಧಿಗಳನ್ನು ಪರಿಗಣಿಸಲಾಗುತ್ತಿತ್ತು. ಆದರೆ ಈ ಬಾರಿ ಜಿಲ್ಲಾಧಿಕಾರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ನಗರಸಭೆ ಸದಸ್ಯರಿಗೂ ಭದ್ರತಾ ಸಿಬ್ಬಂದಿ ಪ್ರವೇಶ ನೀಡುತ್ತಿಲ್ಲ ಎಂದು ನಗರಸಭೆಯ ಕೆಲ ಸದಸ್ಯರು ನಗರಸಭೆ ಮುಂಭಾಗ ಇರುವ ಮುಖ್ಯದ್ವಾರದ ಬಳಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಪಾಸ್ ನೆರವಿನಿಂದ ಬೇಗ ದರ್ಶನ ಪಡೆಯಬೇಕೆಂದವರು ಐದಾರು ಗಂಟೆ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಇಷ್ಟೊಂದು ಪಾಸ್‌ಗಳ ಹಂಚಿಕೆ ಮಾಡಿದ್ದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದರು.

ಹಾಸನಾಂಬೆ ದೇವಿ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರು

Oct 30 2024, 12:50 AM IST

 ಯಡಿಯೂರಪ್ಪ ಹಾಗೂ ಕುಟುಂಬದವರು   ಹಾಸನಾಂಬೆ ದೇವಿ ದರ್ಶನ ಪಡೆದರು. ಇದೇ ವೇಳೆ   ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ  ಎಂದರು.

ಹಾಸನಾಂಬೆ ದರ್ಶನ ಪಡೆದ ಮಾಜಿ ಸಚಿವ ಈಶ್ವರಪ್ಪ

Oct 30 2024, 12:38 AM IST
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಕುಟುಂಬ ಸಮೇತವಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದರು. ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಈ ವರ್ಷವೂ ಕೂಡ ಆ ತಾಯಿ ಹಾಸನಾಂಬೆ ದರ್ಶನ ಭಾಗ್ಯ ನಮಗೆ ಕೊಟ್ಟಿದ್ದು, ಆ ತಾಯಿಯ ಕೃಪೆಯಿಂದ ಇಡೀ ಕರ್ನಾಟಕ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ ಎಂದರು.
  • < previous
  • 1
  • 2
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved