ಹಾಸನಾಂಬೆ ಉತ್ಸವ ಟೆಂಡರ್‌ನಲ್ಲಿ ಭಾರಿ ಅಕ್ರಮ

Oct 04 2025, 12:00 AM IST
ಜಿಲ್ಲೆಯ ಅಧಿದೇವತೆ ಹಾಸನಾಂಬೆ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆಯೋಜನೆಯಲ್ಲಿ ಜಿಲ್ಲಾಡಳಿತದಿಂದ ಪಾರದರ್ಶಕ ಕೆಲಸ ನಡೆಯುತ್ತಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದ್ದಾರೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿ ಗೋಲ್ಡನ್ ಪಾಸ್ ವಿತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಈ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ. ಯಾರಿಗೆ ಪಾಸ್ ನೀಡಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಪ್ರತಿದಿನ 1 ಸಾವಿರ ಪಾಸ್ ವಿತರಣೆ, ಒಟ್ಟು 18 ಸಾವಿರ ಪಾಸ್ ಮುದ್ರಣಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಈಗಾಗಲೇ 40 ಸಾವಿರ ಪಾಸ್ ಮುದ್ರಿಸಲಾಗಿದೆ ಎಂದು ಆರೋಪಿಸಿದರು.