ಪೌರಕಾರ್ಮಿಕರ ಆರೋಗ್ಯ ತಪಾಸಣೆಗೆ ಕ್ರಮ ವಹಿಸಿ
Oct 28 2025, 12:15 AM ISTಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೆ ಇ.ಪಿ.ಎಫ್ ಮತ್ತು ಪಿ.ಎಫ್. ಹಣ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವಂತೆ ಸೂಚಿಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಮತ್ತಿತರರು ಹಾಜರಿದ್ದರು.