ನಾಯಕನಿಲ್ಲದೇ ಭಾರವಾದ ಹೆಜ್ಜೆಗಳೊಂದಿಗೆ ಗಜಪಡೆ ವಾಪಸ್
Dec 07 2023, 01:15 AM ISTಜಿಲ್ಲೆಯ ವಿವಿಧ ಭಾಗಗಳಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡುವುದು ಮತ್ತು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟ ಹಿನ್ನೆಲೆ ಕಾರ್ಯಾಚರಣೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಉಳಿದ ಸಾಕಾನೆಗಳನ್ನು ಬುಧವಾರ ಬೀಳ್ಕೊಡಲಾಯಿತು.ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ತಾತ್ಕಾಲಿಕ ಆನೆ ಶಿಬಿರದಲ್ಲಿ ಸಿಸಿಎಫ್ ರವಿಶಂಕರ್, ಡಿಸಿಎಫ್ ಮೋಹನ್ ಕುಮಾರ್, ಎಸಿಎಫ್ ಮಹದೇವ್ ಸಾಕಾನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಬೀಳ್ಕೊಟ್ಟರು.