ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಕಬ್ಬಿನಾಲೆ ವ್ಯಾಪ್ತಿಯ ಬಲ್ಲಾಡಿ ಗುಮ್ಮಗುಂಡಿ ತೋಡು ಹಾಗೂ ಕೆಲಕಿಲ ನದಿಯಲ್ಲಿ ಭಾನುವಾರ ಉಂಟಾದ ಭಾರಿ ಪ್ರವಾಹದಲ್ಲಿ ವೃದ್ದೆಯೊಬ್ಬಳು ಕೊಚ್ಚಿ ಹೋಗಿದ್ದು, ಆಕೆಯ ಮೃತದೇಹ ಸುಮಾರು ಎರಡು ಕಿ.ಮೀ. ದೂರದ ಬಲ್ಲಾಡಿಯ ಅರ್ಧನಾರೀಶ್ವರ ದೇವಸ್ಥಾನದ ಬಳಿ ಸೋಮವಾರ ಪತ್ತೆಯಾಗಿದೆ.