• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಫಲಕ ಅಳವಡಿಕೆ ಆದೇಶ: ಜಿಲ್ಲಾಧಿಕಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆ

May 30 2024, 12:51 AM IST
ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಪ್ರಮುಖ ಸ್ಥಾನದಲ್ಲಿರಬೇಕು ಮತ್ತು ಶೇ. 60ರಷ್ಟು ಭಾಗ ಕನ್ನಡದಲ್ಲಿ ಇರಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರ ಹಾಗೂ ಜಿಲ್ಲೆಯಲ್ಲಿ ಅಳವಡಿಸಲು ಆದೇಶಿಸಿರುವ ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನು ಅಭಿನಂದಿಸಿ ಪತ್ರ ಬರೆಯುವಂತೆ ತೀರ್ಮಾನಿಸಲಾಯಿತು.

‘ಸ್ಕೂಲ್ ಲೀಡರ್’ ಕನ್ನಡ ಮಕ್ಕಳ ಚಲನಚಿತ್ರದ ಚಿತ್ರೀಕರಣ ಮುಕ್ತಾಯ

May 30 2024, 12:47 AM IST
ಕಟಪಾಡಿಯ ಎಸ್.ವಿ.ಎಸ್. ಪ್ರೌಢಶಾಲೆಯನ್ನು ಕೇಂದ್ರವಾಗಿರಿಸಿಕೊಂಡು ಚಿತ್ರ ತಂಡವು ಸುಮಾರು ೩೫ ದಿನಗಳ ಚಿತ್ರೀಕರಣವನ್ನು ಎರಡು ಹಂತಗಳಲ್ಲಿ ನಡೆಸಿದೆ. ಶೇ.೯೦ರಷ್ಟು ಭಾಗವನ್ನು ಒಂದೇ ಶಾಲೆಯಲ್ಲಿ ಚಿತ್ರೀಕರಣಗೊಳಿಸಲಾಗಿದೆ ಎಂದು ಚಿತ್ರತಂಡವು ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಸಾಧನೆ ಮಾಡುವುದು ಕಠಿಣ ಕೆಲಸ: ಉಪನ್ಯಾಸಕ ಮೂಲಿಮನಿ

May 29 2024, 12:50 AM IST
ಬಾದಾಮಿಯ ಜಯನಗರದ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಕಸಾಪದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಾತೃಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಕನ್ನಡ ಭಾಷಾ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಜಾಗತೀಕರಣದಿಂದ ಕನ್ನಡ ನಾಡು, ನುಡಿಗೆ ಹಿನ್ನಡೆ

May 28 2024, 01:13 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಅನ್ನದ ಭಾಷೆಯಾಗಬೇಕು. ಜಾಗತೀಕರಣದ ಪ್ರಭಾವದಿಂದ ಕನ್ನಡ ನಾಡು ನುಡಿಗೆ ಹಿನ್ನಡೆ ಆಗುತ್ತಿರುವದು ವಿಷಾದನೀಯ. ಕನ್ನಡಿಗರು ಇತರ ಭಾಷೆಯ ವ್ಯಾಮೋಹದಿಂದ ತಮ್ಮ ಮಕ್ಕಳನ್ನು ಜಾಗತೀಕರಣದ ಪೈಪೋಟಿಗೆ ವಾಲುತ್ತಿರುವುದು ಕನ್ನಡ ಭಾಷೆಗೆ ಹಿನ್ನಡೆ ಯಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಕೋಶಾಧ್ಯಕ್ಷ ಡಾ.ಸಂಗಮೇಶ ಮೇತ್ರಿ ಹೇಳಿದರು.

ಕನ್ನಡ ಲೋಕಕ್ಕೆ ಇಂಗ್ಲಿಷ್‌ ಸಾಹಿತ್ಯ ಪರಿಚಯಿಸಿದ ಶೇಷಗಿರಿರಾವ್

May 28 2024, 01:12 AM IST
ಶೇಷಗಿರಿರಾವ್‌ರು ಹತ್ತಾರು ಕನ್ನಡ ಚಳವಳಿಗಳನ್ನು ಬೆಂಗಳೂರು ನೆಲದಲ್ಲಿ ಕಟ್ಟಿದವರು. ಅಂದಿಗಿಂತ ಇಂದು ಕನ್ನಡ ಚಳವಳಿಗಳ ಅವಶ್ಯಕತೆ ಇದೆ. ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರ ನೇಮಕಾತಿ ಇಲ್ಲ. ಕನ್ನಡ ಪ್ರಾಥಮಿಕ ಶಾಲೆಗಳು ಮುಚ್ಚಿಕೊಳ್ಳುತ್ತಿವೆ. ಇವುಗಳ ವಿರುದ್ಧ ಕನ್ನಡಿಗರು ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ.

ಪೂಂಜ ಪ್ರಕರಣದಲ್ಲಿ ಪೊಲೀಸ್‌ ಹಿಮ್ಮೆಟ್ಟಿಲ್ಲ: ದಕ್ಷಿಣ ಕನ್ನಡ ಎಸ್ಪಿ

May 28 2024, 01:10 AM IST
ಬೆಳ್ತಂಗಡಿ ತಾಲೂಕಿನ ಅಕ್ರಮ ಗಣಿಗಾರಿಕೆ ಕೇಸಿನಲ್ಲಿ ಶಾಸಕ ಹರೀಶ್‌ ಪೂಂಜ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಪೊಲೀಸರು ಹಿಮ್ಮೆಟ್ಟಿಲ್ಲ, ಜನಪ್ರತಿನಿಧಿಗಳು ಇಲಾಖೆಯ ಅಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಮನವಿಯ ಮೇರೆಗೆ ವಾಪಸು ಬಂದಿದ್ದೇವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್‌ ಸಿ.ಬಿ. ಸ್ಪಷ್ಟಪಡಿಸಿದ್ದಾರೆ.

ಸಂಸ್ಕೃತದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಸಮೃದ್ಧ:ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್

May 28 2024, 01:06 AM IST
ಎಲ್ಲರ ಸಮಗ್ರ ಶ್ರಮದಿಂದ ಸಂಸ್ಕೃತ ಭಾಷೆಯ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಲಾಗಿದೆ. ಸಂಸ್ಕೃತದಿಂದ ಕನ್ನಡಕ್ಕೆ ಬಂದಿರುವ ಕಾವ್ಯ ಪರಂಪರೆಯ ಕಲ್ಪನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಯಿತು. ಆಧುನಿಕ ವಿಮರ್ಶಕರು, ಚಿಂತಕರು ಸಹ ಪ್ರಾಚೀನ ಪರಂಪರೆಯತ್ತ ಬರಲು ಸಾಧ್ಯವಾಯಿತು.

ಶೋಚನೀಯ ಸ್ಥಿತಿಗೆ ತಲುಪಿದ ಕನ್ನಡ ಶಾಲೆಗಳು: ಸ್ವಾಮೀಜಿ

May 27 2024, 01:08 AM IST
ರಾಜ್ಯದ ಗಡಿ ಭಾಗದಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ತಮಿಳು, ತೆಲುಗು, ಮರಾಠಿ ಭಾಷೆ ಪ್ರಭಾವ ಜಾಸ್ತಿಯಾಗಿದೆ. ಕನ್ನಡ ಉಳಿಸಿ ಬೆಳೆಸಲು ಶ್ರಮ ಪಡಬೇಕಿದೆ.

ಫ್ಲೆಕ್ಸ್‌ಗಳಲ್ಲಿ ಕನ್ನಡ ನಿರ್ಲಕ್ಷ್ಯಿಸಿ, ಆಂಗ್ಲ ಪದಗಳ ದರ್ಬಾರು

May 27 2024, 01:03 AM IST
ರಾಜ್ಯಾದ್ಯಂತ ದಿನನಿತ್ಯ ಕನ್ನಡಪರ ಹೋರಾಟಗಾರರು ಕನ್ನಡ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ಹೆಸರು ಹೇಳಿಕೊಂಡು ರಾಜಕೀಯ ಅಭ್ಯರ್ಥಿಗಳು ಗೆಲ್ಲುತ್ತಿದ್ದಾರೆ. ಆದರೆ ಸರ್ಕಾರ ಕನ್ನಡ ರಕ್ಷಣೆಗಾಗಿ ಕಾನೂನುಗಳನ್ನು ಮಾಡಿ, ಅದನ್ನು ಪಾಲಿಸದೇ ಕಣ್ಮುಚ್ಚಿ ಕುಳಿತಿದೆ ಎಂದು ಕರುನಾಡ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಗೋಪಾಲಗೌಡ ಆರೋಪಿಸಿದ್ದಾರೆ.

ಶಿಕ್ಷಣ ಸಚಿವರಿಗೇ ಕನ್ನಡ ಬರಲ್ಲ: ಬಿವೈವಿ

May 26 2024, 01:34 AM IST

ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದೆ. ಶಿಕ್ಷಣ ಸಚಿವರಿಗೇ ಸರಿಯಾಗಿ ಕನ್ನಡ ಓದಲು, ಬರೆಯಲು ಬರಲ್ಲವೆಂದರೆ ಶಿಕ್ಷಣ ಕ್ಷೇತ್ರದ ಬಗ್ಗೆ ರಾಜ್ಯ ಸರ್ಕಾರ ಅದೆಷ್ಟು ಗಂಭೀರವಾಗಿ ಯೋಚನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved