• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

Feb 04 2024, 01:34 AM IST
ಗುಳೇದಗುಡ್ಡ: ತಾಲೂಕಿನ ಕಟಗೇರಿಯಲ್ಲಿ ಫೆ.10ರಂದು ಜರುಗುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಎಂ. ಹುಗ್ಗಿ ಅವರನ್ನು ಶುಕ್ರವಾರ ಕೊಂಕನಕೊಪ್ಪ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು, ಹಿರಿಯರು ಗ್ರಾಮದ ದ್ಯಾಮವ್ವ ತಾಯಿ ದೇವಸ್ಥಾನದಲ್ಲಿ ಸನ್ಮಾನ ಮಾಡಿ, ಪತ್ರ ನೀಡಿ ಅಧಿಕೃತ ಆಹ್ವಾನ ನೀಡಿದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಡಾ.ಎಚ್.ಎಸ್. ಘಂಟಿ ಸನ್ಮಾನಿಸಿ ಮಾತನಾಡಿದರು.

ಹೃದಯ ಭಾಷೆಯಾಗಿ ಕನ್ನಡ ಆರಾಧಿಸಬೇಕು: ಸಚಿವ ಮಧು

Feb 04 2024, 01:33 AM IST
ಎಲ್ಲ ಭಾಷೆಗಳಿಗಿಂತ ಸರಳ ಮತ್ತು ಸುಲಲಿತ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಹೃದಯದ ಭಾಷೆಯಾಗಿ ಸ್ವೀಕರಿಸಿ ಆರಾಧಿಸಬೇಕು. ಕನ್ನಡ ನಾಡಿನ ನೆಲ, ಜಲ, ಭಾಷೆಯ ಭಾವೈಕ್ಯತೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸೈನಿಕರ ರೀತಿಯಲ್ಲಿ ಕಟಿಬದ್ಧರಾಗಿ ಹೋರಾಡುವ ಅಗತ್ಯವಿದೆ. ಎಲ್ಲೇ ಇದ್ದರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇತರೆ ಭಾಷೆಗಳನ್ನು ವ್ಯಾವಹಾರಿಕವಾಗಿ ಬಳಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.

ಕನ್ನಡ ಉಳಿಯಲು ಆತ್ಮಾವಲೋಕನ ಅಗತ್ಯ: ಸಚಿವ ಈಶ್ವರ ಖಂಡ್ರೆ

Feb 04 2024, 01:32 AM IST
ಬೀದರ್‌ನಲ್ಲಿ ನೂತನ ಕನ್ನಡ ಭವನದ ಅದ್ಧೂರಿ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೆರವೇರಿಸಿ ಮಾತನಾಡಿದರು.

ಅಂತೂ ಬೀದರ್‌ನಲ್ಲಿ ನಿರ್ಮಾಣವಾಯ್ತು ಕನ್ನಡ ಭವನ

Feb 03 2024, 01:54 AM IST
ಎರಡ್ಮೂರು ಬಾರಿ ಮುಖ್ಯಮಂತ್ರಿ, ಸಚಿವರಿಂದ ಶಂಕುಸ್ಥಾಪನೆಗೊಂಡು ಸ್ಥಳಾಂತರಗೊಂಡು, ಹಲವಾರು ವಿರೋಧಗಳನ್ನು ಎದುರಿಸಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣಾ ಅಸ್ತ್ರವಾಗಿ, ಅನುದಾನದ ಕೊರತೆ ಹೊತ್ತು ಕೊನೆಗೂ ಉದ್ಘಾಟನೆಗೆ ಸಜ್ಜಾಗಿದೆ ಜಿಲ್ಲಾ ಕನ್ನಡ ಭವನ.

ಕನ್ನಡ ಕಟ್ಟಲು ಕನ್ನಡದ ಪರಂಪರೆಯ ತಿಳುವಳಿಕೆ ಅಗತ್ಯ: ಮೊಯ್ಲಿ

Feb 03 2024, 01:50 AM IST
ಹೆಬ್ರಿ ತಾಲೂಕಿನ ಮುದ್ರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕನೇ ಸಾಹಿತ್ಯ ಸಮ್ಮೇಳನ ನಡೆಯಿತು. ಕಾರ್ಯಕ್ರಮದಲ್ಲಿ ಆಕರ್ಷಕ ಮೆರವಣಿಗೆ, ಪುಸ್ತಕ ಬಿಡುಗಡೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಗೋಷ್ಠಿಗಳು ನಡೆಯಿತು.

ಕಾನ್ವೆಂಟ್‌ ಸಂಸ್ಕೃತಿಯಿಂದ ಕನ್ನಡ ಮಾಯ: ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ

Feb 03 2024, 01:50 AM IST
ನಗರ ಪ್ರದೇಶಗಳಲ್ಲಿರುವ ಕಾನ್ವೆಂಟ್‌ ಸಂಸ್ಕೃತಿ ಗ್ರಾಮೀಣ ಪ್ರದೇಶಕ್ಕೂ ಕಾಲಿಟ್ಟಿದ್ದು ಅದು ಹೀಗೆ ಮುಂದುವರೆದರೆ ಕನ್ನಡತನ ಅಳಿಸಿಹೊಗಿ, ಸಂಸ್ಕೃತಿ ಮಾಯವಾಗಲಿದೆ ಎಂದು ಸಾಣೇಹಳ್ಳಿಯ ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಫೆಬ್ರವರಿ 8 ರಂದು ಚನ್ನರಾಯಪಟ್ಟಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

Feb 03 2024, 01:49 AM IST
ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೮ ರಂದು ಕಲ್ಕೆರೆಯ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ತಿಳಿಸಿದರು.

ಕನ್ನಡ ಸಾಹಿತ್ಯಕ್ಕೆ ಸಂಭ್ರಮ ಉಂಟುಮಾಡುವ ಶಕ್ತಿ ಇದೆ: ಷಣ್ಮುಖಪ್ಪ ಮುಚ್ಚಂಡಿ

Feb 03 2024, 01:48 AM IST
ಅಕ್ಕಿಆಲೂರು ಪಟ್ಟಣದ ಮುತ್ತಿನಕಂತಿಮಠದ ಆವರಣದಲ್ಲಿ ನಡೆದಿರುವ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ವೈಭವದಿಂದ ನಡೆಯಿತು. ಕಸಾಪ ತಾಲೂಕು ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಉತ್ತರ ಕನ್ನಡ ಜಿಲ್ಲೆಯ ಮರಳು ಸಮಸ್ಯೆಗೆ ಪರಿಹಾರ ಕೈಗೊಳ್ಳಿ

Feb 03 2024, 01:48 AM IST
ಜಿಲ್ಲೆಯಲ್ಲಿ ಕಂಡುಬರುತ್ತಿರುವ ಮರಳು ಸಮಸ್ಯೆ ಪರಿಹರಿಸಲು ಆದಷ್ಟು ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಂಡು, ಜನರಿಗೆ ಕಡಿಮೆ ದರದಲ್ಲಿ, ಸಾಕಷ್ಟು ಪ್ರಮಾಣದಲ್ಲಿ ಮರಳು ವಿತರಿಸಲು ಅಗತ್ಯಕ್ರಮ ಕೈಗೊಳ್ಳಬೇಕು.

ನಿಗದಿತ ಅವಧಿಯೊಳಗೆ ಸಕಾಲ ಸೇವೆ: ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೆ ಮೊದಲು

Feb 03 2024, 01:47 AM IST
ಸಕಾಲ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಗದಿಪಡಿಸಿದ ಅವಧಿಗೂ ಮುಂಚೆಯೇ ತ್ವರಿತವಾಗಿ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೆ ಒಂದನೇ ಸ್ಥಾನದಲ್ಲಿದೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved