ಜಬ್ಬಲಗುಡ್ಡ ಬಳಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Nov 27 2023, 01:15 AM IST
ಕೊಪ್ಪಳ ತಾಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕಿನ ಜಬ್ಬಲಗುಡ್ಡ ಗ್ರಾಮದ ಬಳಿ ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆಯು ಭಾನುವಾರ ಕೊಪ್ಪಳ ತಾಲೂಕಿಗೆ ಪ್ರವೇಶಿಸಿತು. ಬೆಳಗ್ಗೆ ಗಂಗಾವತಿಯಿಂದ ಹೊರಟ ರಥಯಾತ್ರೆ ಬೂದಗುಂಪಾ ಮಾರ್ಗವಾಗಿ ಕೊಪ್ಪಳ ತಾಲೂಕಿಗೆ ಪ್ರವೇಶ ಮಾಡಿತು. ತಾಲೂಕಿನ ಮಾರ್ಗ ಮಧ್ಯೆದ ಜಬ್ಬಲಗುಡ್ಡ ಗ್ರಾಮದಲ್ಲಿ ಬಳಿಯಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಜಬ್ಬಲಗುಡ್ಡ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳ ಮಹಿಳೆಯರು ರಥದ ಮುಂದೆ ಕುಂಭ ಹೊತ್ತು ಸಾಗಿದರು. ಕನ್ನಡಪರ ಸಂಘಟನೆಗಳು, ವಿವಿಧ ಸಂಘಟನೆಗಳು, ಮುಖಂಡರು ರಥಯಾತ್ರೆ ಸ್ವಾಗತಿಸಿದರು. ಕನ್ನಡ ಧ್ವಜದ ಶಾಲುಗಳನ್ನು ಹಾಕಿ, ಕನ್ನಡ ಜಯಘೋಷ ಕೂಗುತ್ತಾ ಸಾಲಾಗಿ ಹೆಜ್ಜೆ ಹಾಕಿ ಸಂಭ್ರಮಿಸಿದರು. ರಥಯಾತ್ರೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಅರಳಿಸುವ ಕನ್ನಡ ಬೇಕೇ ಹೊರತು, ಕೆರಳಿಸುವುದಲ್ಲ

Nov 26 2023, 01:15 AM IST
ಕಸ್ತೂರಬಾ ಬಾಲಕಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಡಾ. ಬಿ.ಎನ್. ತಂಬುಳಿ ಮಾತನಾಡಿ, ಕನ್ನಡಿಗರು ಸ್ವಾಭಿಮಾನಿಗಳು. ಇಲ್ಲಿ ಗಂಭೀರತೆ ಇದೆ, ಉದಾರತೆ ಇದೆ. ಕವಿಗಳಿದ್ದಾರೆ. ಕಾವ್ಯಗಳಿವೆ, ಶಿಲ್ಪಗಳಿವೆ. ವಿಶ್ವದಲ್ಲಿಯೇ ಶ್ರೇಷ್ಠವಾದ ಈ ಭಾಷೆಯನ್ನು ಅಕ್ಷರ ಕಲಿತವರು ಬೆಳೆಸಬೇಕಾಗಿದೆ ಎಂದರು. ಹಾಗೆ ನೋಡಿದರೆ ಅನಕ್ಷರಸ್ಥ ಸಮಾಜದಿಂದಲೇ ಕನ್ನಡ ಉಳಿದು ಬೆಳೆದಿದೆ. ಶತಮಾನಗಳಿಂದಲೂ ತಮ್ಮ ಹೊಟ್ಟೆಪಾಡಿಗಾಗಿ ಊರೂರು ತಿರುಗುತ್ತಿದ್ದ ಬಳೆಗಾರರು, ಬುಡಬುಡಕಿಯವರು, ಜೋಗಿಗಳು, ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಮಾತನಾಡುತ್ತಾರೆ. ಅವರ ಕನ್ನಡ ಭಾಷೆಯನ್ನು ಕೇಳಿದರೆ ಮನಸ್ಸು ಖುಷಿಗೊಳ್ಳುತ್ತದೆ. ಅವರ ಜಾಣ್ಮೆ ಹಾಗಿತ್ತು. ಜನಪದರಿಂದಲೇ ಕನ್ನಡ ಭಾಷೆ ಉಳಿಯುತ್ತಿದೆ ಎಂದು ಹೇಳಿದರು.