ಅರಳಿಸುವ ಕನ್ನಡ ಬೇಕೇ ಹೊರತು, ಕೆರಳಿಸುವುದಲ್ಲ

Nov 26 2023, 01:15 AM IST
ಕಸ್ತೂರಬಾ ಬಾಲಕಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಡಾ. ಬಿ.ಎನ್. ತಂಬುಳಿ ಮಾತನಾಡಿ, ಕನ್ನಡಿಗರು ಸ್ವಾಭಿಮಾನಿಗಳು. ಇಲ್ಲಿ ಗಂಭೀರತೆ ಇದೆ, ಉದಾರತೆ ಇದೆ. ಕವಿಗಳಿದ್ದಾರೆ. ಕಾವ್ಯಗಳಿವೆ, ಶಿಲ್ಪಗಳಿವೆ. ವಿಶ್ವದಲ್ಲಿಯೇ ಶ್ರೇಷ್ಠವಾದ ಈ ಭಾಷೆಯನ್ನು ಅಕ್ಷರ ಕಲಿತವರು ಬೆಳೆಸಬೇಕಾಗಿದೆ ಎಂದರು. ಹಾಗೆ ನೋಡಿದರೆ ಅನಕ್ಷರಸ್ಥ ಸಮಾಜದಿಂದಲೇ ಕನ್ನಡ ಉಳಿದು ಬೆಳೆದಿದೆ. ಶತಮಾನಗಳಿಂದಲೂ ತಮ್ಮ ಹೊಟ್ಟೆಪಾಡಿಗಾಗಿ ಊರೂರು ತಿರುಗುತ್ತಿದ್ದ ಬಳೆಗಾರರು, ಬುಡಬುಡಕಿಯವರು, ಜೋಗಿಗಳು, ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಮಾತನಾಡುತ್ತಾರೆ. ಅವರ ಕನ್ನಡ ಭಾಷೆಯನ್ನು ಕೇಳಿದರೆ ಮನಸ್ಸು ಖುಷಿಗೊಳ್ಳುತ್ತದೆ. ಅವರ ಜಾಣ್ಮೆ ಹಾಗಿತ್ತು. ಜನಪದರಿಂದಲೇ ಕನ್ನಡ ಭಾಷೆ ಉಳಿಯುತ್ತಿದೆ ಎಂದು ಹೇಳಿದರು.

ಚಂದ್ರವಳ್ಳಿಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ

Nov 20 2023, 12:45 AM IST
ಕನ್ನಡ ರಾಜ್ಯೋತ್ಸವ ಆಚರಣೆ ಅಂದಾಕ್ಷಣ ಭುವನೇಶ್ವರಿ ಮೆರವಣಿಗೆ, ಆರ್ಕೆಸ್ಟ್ರಾ ಆಯೋಜನೆ, ಕನ್ನಡ ಭಾಷೆ ಅಳಿವು ಉಳಿವಿನ ಬಗ್ಗೆ ಭಾಷಣಗಳು ಮಾಮೂಲು. ಆದರೆ ಇದರೆಲ್ಲದರಾಚೆ ವಿನೂತನ ರಾಜ್ಯೋತ್ಸವ ಆಚರಣೆಗೆ ಭಾನುವಾರ ಚಿತ್ರದುರ್ಗ ಸಾಕ್ಷಿಯಾಯಿತು. ಚಿತ್ರದುರ್ಗ ಚಂದ್ರವಳ್ಳಿಯಲ್ಲಿರುವ ಮಯೂರವರ್ಮನ ಶಾಸನದ ಮಾಹಿತಿ ಪ್ರಚುರ ಪಡಿಸುವ ಮೂಲಕ ಕನ್ನಡದ ಮೊದಲ ಸಾಮ್ರಾಜ್ಯ ಉದಯವಾದ ಐತಿಹ್ಯ ಮನನ ಮಾಡಿಕೊಡಲಾಯಿತು.ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿ ಗಮನ ಸೆಳೆದರು. ಚಂದ್ರವಳ್ಳಿಯಲ್ಲಿ ನಿತ್ಯ ನೂರಾರು ವಾಯುವಿಹಾರಿಗಳು ಜಮಾವಣೆಗೊಳ್ಳುತ್ತಿದ್ದು ಅವರೆಲ್ಲರ ಸಮ್ಮುಖದಲ್ಲಿ ಖ್ಯಾತ ಶಾಸನ ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಶಾಸನದಲ್ಲಿನ ಹೂರಣವ ಬಿಚ್ಚಿಟ್ಟರು. ಮುಂಜಾನೆ ಚುಮು ಚುಮು ಚಳಿಯ ನಡುವೆ ಶಾಸನದ ಮುಂಭಾಗವೇ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿಶೇಷ.