ಮರಾಠಿಗರ ಕನ್ನಡ ವಿರೋಧಿ ನೀತಿ, ಎಂಇಎಸ್ ನಿಷೇಧ, ಮಹದಾಯಿ, ಮೇಕೆದಾಟು ಜಲಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.