ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.
ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಬಜೆಟ್ನಲ್ಲಿ ಒಟ್ಟಾರೆ 7145 ಕೋಟಿ ರು. ಮೀಸಲಿಡಲಾಗಿದೆ.
ರಾಜ್ಯದ ಬಜೆಟ್ ಗಾತ್ರ 4.09 ಲಕ್ಷ ಕೋಟಿ ರು. ತಲುಪಿದ್ದು ಈ ಪೈಕಿ ರಾಜ್ಯ ತೆರಿಗೆ ಆದಾಯದಿಂದ 2.08 ಲಕ್ಷ ಕೋಟಿ ರು. ಬರಲಿದೆ. ಉಳಿದ ಮೊತ್ತವನ್ನು ಕೇಂದ್ರದ ತೆರಿಗೆ ಪಾಲು, ಸಹಾಯ ಅನುದಾನ ಹಾಗೂ ಸಾಲದ ರೂಪದಲ್ಲಿ ನಿರೀಕ್ಷಿಸಲಾಗಿದೆ.
ದೇಶೀಯ ತಳಿಗಳ ರಕ್ಷಣೆಗೆ 2 ಕೋಟಿ ರು. ಅನುದಾನ, ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುತ್ತಿದ್ದ ಪರಿಹಾರ ಮೊತ್ತ ಹೆಚ್ಚಳ, 50 ನೂತನ ಪಶು ಚಿಕಿತ್ಸಾಲಯ ಸ್ಥಾಪನೆ, ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಮತ್ತು ಹೈಟೆಕ್ ಮತ್ಸ್ಯದರ್ಶಿನಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲು ಒಂದೂವರೆ ವರ್ಷದಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಸಹಾಯಧನ ಸ್ಥಗಿತ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ಬಡವರ ಮನೆಗಳ ಸಾಲದ ಮೇಲಿನ ಬಡ್ಡಿ ಕಡಿತ, ಸರ್ಕಾರದ ಜಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಡವರ ಮನೆಗಳ ನಿರ್ಮಾಣ, ಬೆಂಗಳೂರಿನಲ್ಲಿ ಕೆಎಚ್ಬಿಯ ಸೂರ್ಯ ನಗರ 4 ಹಂತದ ಯೋಜನೆಯಡಿ ನಿವೇಶನಗಳ ಹಂಚಿಕೆ ಸೇರಿದಂತೆ ವಸತಿ ಇಲಾಖೆಗೆ ಬಜೆಟ್ನಲ್ಲಿ ವಿಶೇಷ ಆದ್ಯತೆಗಳನ್ನು ನೀಡಲಾಗಿದೆ.
ರಾಜ್ಯದ ಬೊಕ್ಕಸ ಭರ್ತಿ ಮಾಡಿಕೊಳ್ಳಲು ಜನಸಾಮಾನ್ಯರ ಮೇಲೆ ಯಾವುದೇ ಹೊಸ ತೆರಿಗೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಸಿದ್ದು ಭರ್ಜರಿ ಸಹಕಾರ
- ಕಲಬುರಗಿಯಲ್ಲಿ ಮೆಗಾ ಡೈರಿ, ಕೊಪ್ಪಳದಲ್ಲಿ ಕುರಿ- ಮೇಕೆ ಮಾರುಕಟ್ಟೆ
- ತೊಗರಿಗೆ ₹450 ಪ್ರೋತ್ಸಾಹ ಧನ । ಹೈನುಗಾರಿಕೆಗೆ ₹10 ಕೋಟಿ
- ರಾಜ್ಯದ ಎಪಿಎಂಸಿಗಳಲ್ಲಿ ದುಡಿವ ಶ್ರಮಿಕರಿಗೆ ಇನ್ನು 5 ಲಕ್ಷ ರು. ವಿಮೆ