ಬಿಜೆಪಿ-ಬಿಆರ್‌ಎಸ್ ಭಯ<bha>;</bha> ತೆಲಂಗಾಣಕ್ಕೆ ಕಾಂಗ್ರೆಸ್ ಶಾಸಕರು

Dec 03 2023, 01:00 AM IST
ಕನ್ನಡಪ್ರಭ ವಾರ್ತೆ ಬಳ್ಳಾರಿತೆಲಂಗಾಣದಲ್ಲಿ ಬಿಜೆಪಿ ಹಾಗೂ ಬಿಆರ್‌ಎಸ್ ಪಕ್ಷದಿಂದ ಕಾಂಗ್ರೆಸ್ಸಿಗೆ ಭಯವಿದ್ದು, ಶನಿವಾರ ಸಂಜೆಯೊಳಗೆ ಚುನಾವಣೆಯಲ್ಲಿ ಭಾಗಿಯಾದ ಎಲ್ಲ ಶಾಸಕರು ತೆಲಂಗಾಣಕ್ಕೆ ತೆರಳಲು ಎಐಸಿಸಿ ಸೂಚನೆ ನೀಡಿದೆ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಹೇಳಿದರು.ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದು ಖಚಿತ. ಆದರೆ, ಬಿಜೆಪಿಯವರು ದೇಶದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಆರ್ ಎಸ್ ಹಾಗೂ ಬಿಜೆಪಿಯವರು ಸೇರಿ ಏನಾದರೂ ಮಾಡುತ್ತಾರೆ (ಆಪರೇಷನ್ ಕಮಲ) ಎಂಬ ಭಯವಿದೆ. ನಮ್ಮ ಶಾಸಕರಿಗೆ ಬೆದರಿಕೆ ಹಾಕುವ ಸಾಧ್ಯತೆಯೂ ಇದೆ. ಹೀಗಾಗಿ ನಮ್ಮ ಶಾಸಕರ ರಕ್ಷಣೆಗಾಗಿ ತೆಲಂಗಾಣಕ್ಕೆ ತೆರಳುತ್ತಿದ್ದೇವೆ ಎಂದರು.