ರಾಜ್ಯ ಕಾಂಗ್ರೆಸ್‌ ಸರ್ಕಾರ ಬಲಗೈಲಿ ಕೊಟ್ಟು, ಎಡಗೈಲಿ ಕಿತ್ತುಕೊಳ್ಳುತ್ತಿದೆ: ಕೆ.ಬಿ.ಪ್ರಸನ್ನಕುಮಾರ್‌ ಟೀಕೆ

Nov 21 2023, 12:45 AM IST
ಆರೋಗ್ಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷಿಸುತ್ತಿದೆ. ಸ್ವಚ್ಛತೆ ಇಲ್ಲದೆ ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ. ರಾಜ್ಯ ಸರ್ಕಾರದ ಜನವಿರೋಧಿ ಆಡಳಿತವನ್ನು ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ನ.22ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಕೆ.ಬಿ.ಪ್ರಸನ್ನಕುಮಾರ್‌ ಹೇಳಿದರು. ಪ್ರತಿಭಟನಾ ಮೆರವಣಿಗೆ ನಂತರ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾ ನಾಯ್ಕ ಅವರ ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಸಮ್ಮುಖ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.