ಶಿರಾಡಿ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಹೊಣೆ ಕೇಂದ್ರದ್ದು
May 30 2025, 12:03 AM ISTರಾಷ್ಟ್ರೀಯ ಹೆದ್ದಾರಿ 75ರ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇರವಾಗಿ ಕೇಂದ್ರಸರ್ಕಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಮಗಾರಿ ಗುತ್ತಿಗೆ ನೀಡುವುದರಿಂದ ಹಿಡಿದು ಮೇಲ್ವಿಚಾರಣೆಯನ್ನು ಕೇಂದ್ರ ಸರ್ಕಾರವೇ ನಡೆಸುತ್ತಿದೆ. ಆದ್ದರಿಂದ, ಇಲ್ಲಿನ ಎಲ್ಲ ಅವಘಡಗಳಿಗೂ ಕೇಂದ್ರವೇ ಹೊಣೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಹಾಗೂ ವೇಗವಾಗಿ ಮುಗಿಸುವಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬಹುದೇ ಹೊರತು ಮತ್ಯಾವ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.