ಕಳೆದ ತಿಂಗಳ ಡಿ.21ರಂದು ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದ ಉದ್ಯಮಿ ಚಂದ್ರಮ್ ಅವರ ಕಾರು ಅಪಘಾತ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಚಂದ್ರಶೇಖರ್ ಕೆ.ಆರ್.ಸಾಗರದ ಸಂತೆಗೆ ಬರುತ್ತಿದ್ದ ವೇಳೆ ಎದರುಗಡೆಯಿಂದ ರಭಸವಾಗಿ ಬಂದ ಕಾರು ತನ್ನ ಮುಂದಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕುವ ರಭಸದಲ್ಲಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಪ್ರಸಿದ್ಧ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಜ.8ರಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಕಂಠ ಪೂರ್ತಿ ಮದ್ಯ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಅದೀಗ ವೈರಲ್ ಆಗಿದೆ.