ರಾಜಪ್ಪ ಮಾಸ್ತರ್ ಸುಸಂಸ್ಕೃತ ವ್ಯಕ್ತಿಗಳ ರೂಪಿಸುವ ಕಾರ್ಖಾನೆ

Feb 07 2024, 01:45 AM IST
ಶಿಕ್ಷಕ ವೃತ್ತಿ ಮೂಲಕ ಸುಸಂಸ್ಕೃತ ವ್ಯಕ್ತಿಯನ್ನು ರೂಪಿಸುವ ಕಾರ್ಖಾನೆ ಆಗಿರುವ ಸಮಾಜ ಚಿಂತಕ ರಾಜಪ್ಪ ಮಾಸ್ತರ್ ಅವರನ್ನು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಅವರ ಹಿರಿತನ ಮತ್ತು ಸಾಮಾಜಿಕ ಚಳವಳಿಗೆ ಸಂದ ಗೌರವವಾಗಿದೆ. ಸೊರಬ ಪಟ್ಟಣದಲ್ಲಿ ಫೆ.9ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿಯೊಬ್ಬರಿಗೂ ಹಬ್ಬವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಂಸ್ಕೃತಿಕ ಜಗಲಿ ಸದಸ್ಯರು ಇಡೀ ದಿನ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ರಾಜಪ್ಪ ಮಾಸ್ತರ್ ಅವರ ಸರ್ವಾಧ್ಯಕ್ಷತೆಯ ಕನ್ನಡದ ಜಾತ್ರೆ ಯಶಸ್ವಿಯಾಗಲು ತಾವೆಲ್ಲರೂ ಸಹಕಾರ ನೀಡಬೇಕು ಎಂದು ಕನ್ನಡ ಸಾಂಸ್ಕೃತಿಕ ಜಗಲಿ ಸಂಚಾಲಕ ಎನ್.ಷಣ್ಮುಖಾಚಾರ್ ಸೊರಬದಲ್ಲಿ ಹೇಳಿದ್ದಾರೆ.