ಕಾರ್ಮಿಕರು ದೇಶದ ಬೆನ್ನೆಲುಬು
May 02 2024, 01:32 AM ISTಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ದೇಶದ ಕಾರ್ಮಿಕರಲ್ಲಿ ಸಂಘಟಿತ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಇದ್ದು, ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ. ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆಯನ್ನೂ ಮಾಡಿರುವುದಿಲ್ಲ. ಇದನ್ನು ಕಾರ್ಮಿಕರು ಅರ್ಥ ಮಾಡಿಕೊಳ್ಳಬೇಕು. ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳು ಇರಲಿಲ್ಲ.