ಕಾವೇರಿ ನದಿ ಪ್ರವಾಹಕ್ಕೆ ತಂಬಾಕು ಬೆಳೆಗೆ ಹಾನಿ
Aug 03 2025, 01:30 AM ISTಅರಕಲಗೂಡು ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಕಾವೇರಿ ಪ್ರವಾಹ ಬಂದೆರಗಿದ ಪರಿಣಾಮ ತಂಬಾಕು, ಶುಂಠಿ, ಮುಸುಕಿನ ಜೋಳ ಮತ್ತು ಕಾಫಿ ಬೆಳೆಗೆ ಹಾನಿಯಾಗಿ ಅನ್ನದಾತರು ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಕಳೆದ ಬಾರಿ ತಂಬಾಕಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತ ಖುಷಿಯಲ್ಲಿ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸಸಿಮಡಿ ಬೆಳೆಸಿ ನಾಟಿ ಮಾಡಿದ್ದರು. ನಾಟಿ ಸಮಯದಲ್ಲಿ ಉತ್ತಮವಾಗಿ ಬಿದ್ದ ಮಳೆಯಿಂದ ಬೆಳೆ ಬೆಳವಣಿಗೆ ಕಾಣಬೇಕೆನ್ನುವಷ್ಟರಲ್ಲಿ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಅಪಾರ ಪ್ರಮಾಣದಲ್ಲಿ ಇಳುವರಿ ಕುಂಠಿತಗೊಂಡಿದೆ.