ಮಂಚನಬೆಲೆ ಮತ್ತು ವೈ.ಜಿ.ಗುಡ್ಡಕ್ಕೆ ಕಾವೇರಿ ಹರಿಸಲು ಸಿದ್ಧತೆ

Dec 14 2023, 01:30 AM IST
ಶತಮಾನಗಳಿಂದ ರೈತರ ಕೃಷಿಗೆ ಜಲಮೂಲವಾಗಿದ್ದ ಕೆರೆಗಳು ಬತ್ತಿ ಹೋಗಿ ಬರಪೀಡಿತವಾಗಿರುವ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಸತ್ತೇಗಾಲ ನೀರಾವರಿ ಯೋಜನೆ ವರವಾಗಿ ಪರಿಣಮಿಸುವ ಆಶಾಭಾವನೆ ವ್ಯಕ್ತವಾಗಿದೆ.ಸತ್ತೇಗಾಲ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಆ ಯೋಜನೆಯ ಭಾಗವಾಗಿ ಕಣ್ವ ಜಲಾಶಯದಿಂದ ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಜಲಾಶಯಕ್ಕೆ ಕಾವೇರಿ ನೀರು ತುಂಬಿಸುವ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ಧತೆಗಳು ನಡೆದಿವೆ.ಕಳೆದ ಜನವರಿ ತಿಂಗಳಲ್ಲಿಯೇ ಸತ್ತೇಗಾಲದಿಂದ ಜಿಲ್ಲೆಯ ಜಲಾಶಯಗಳಿಗೆ ಕಾವೇರಿ ನದಿ ನೀರು ತುಂಬಿಸುವ ಯೋಜನೆ ಭಾಗವಾಗಿ ಮೊದಲ ಹಂತದಲ್ಲಿ ಕಣ್ವ ಜಲಾಶಯದಿಂದ ವೈ.ಜಿ.ಗುಡ್ಡ ಜಲಾಶಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸಲಾಗಿತ್ತು. ಇದು ಯಶಸ್ವಿ ಕೂಡ ಆಗಿದ್ದರಿಂದ ಅಧಿಕೃತವಾಗಿ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ.