ಕಾವೇರಿ ವಿಚಾರ ಸೂಕ್ತ ತೀರ್ಮಾನ ಕೈಗೊಳ್ಳಿ: ಶಾಸಕ ಮಂಜು
Dec 09 2023, 01:15 AM ISTಕಾವೇರಿ ನೀರು ಉಳಿಸಲು ಸೂಕ್ತ ತೀರ್ಮಾನ ಕೈಗೊಂಡು ರೈತರು, ಹೋರಾಟಗಾರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಇತಿಶ್ರೀ ಹಾಡಬೇಕು ಎಂದು ಶಾಸಕ ಎಚ್ .ಟಿ.ಮಂಜು ಒತ್ತಾಯಿಸಿದ್ದಾರೆ.ಬೆಳಗಾವಿ ಅಧಿವೇಶನದ ಚರ್ಚೆ ವೇಳೆ ಮಾತನಾಡಿದ ಅವರು, ನಾನೊಬ್ಬ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸುವ ಶಾಸಕನಾಗಿ ಜಿಲ್ಲಾ ಹಿತರಕ್ಷಣ ಸಮಿತಿ ಹಾಗೂ ವಿವಿಧ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ, ಕಾವೇರಿ ಕೊಳದ ನೀರಿನ ರಕ್ಷಣೆಗಾಗಿ ಸರದಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.