ಉತ್ತರ ಕರ್ನಾಟಕ ಭಾಗಕ್ಕೆ ನೀರಾವರಿಯಲ್ಲಿ ದೊಡ್ಡ ಮಟ್ಟದ ಅನ್ಯಾಯವಾಗಿದ್ದು, ಕಾವೇರಿಗೆ ನೀಡುವ ಅರ್ಧದಷ್ಟೂ ಹಣ ಕೃಷ್ಣಾ ಯೋಜನೆಗಳಿಗೆ ನೀಡುತ್ತಿಲ್ಲ. ಗ್ಯಾರಂಟಿಗಳ ಬದಲು ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆಗೆ ಹಣ ನೀಡಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ವೈದಿಕರ ತಂಡ ಪೂಜಾ ವಿಧಿ ವಿಧಾನದ ಕಾರ್ಯವನ್ನು ಶಾಸ್ತೋಕ್ತವಾಗಿ ನೆರವೇರಿಸಿಕೊಟ್ಟರು.ಈ ವೇಳೆ ಎಸ್.ಎಂ.ಕೃಷ್ಣರ ಪುತ್ರಿಯರಾದ ಶಾಂಭವಿ, ಮಾಳವಿಕಾ, ಸಹೋದರನ ಪುತ್ರ ಗುರುಚರಣ್ , ಅಮರ್ತ್ಯ ಹೆಗಡೆ ಪತ್ನಿ ಡಿಕೆಶಿ ಪುತ್ರಿ ಐಶ್ವರ್ಯಾ ಸೇರಿದಂತೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು ಜಲಮಂಡಳಿಯು ಹೊಸ ಸಂಪರ್ಕ ಪಡೆಯುವುದನ್ನು ಸರಳ ಹಾಗೂ ಸುಲಭ ಮಾಡಲು ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾದರಿಯಲ್ಲಿ ಮಿಸ್ ಕಾಲ್ ವ್ಯವಸ್ಥೆ ಜಾರಿಗೆ ತರುವುದಕ್ಕೆ ಮುಂದಾಗಿದೆ!