ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.
ಮೈಕ್ರೋ ಫೈನಾನ್ಸ್ ಕಂಪನಿ, ಬಡ್ಡಿ ದಂಧೆಕೋರರ ಹಾವಳಿ ತಡೆಯಬೇಕಾಗಿದ್ದು, ಈಗಾಗಲೇ ಸುಗ್ರೀವಾಜ್ಞೆ ಮಸೂದೆ ಸಿದ್ಧಪಡಿಸಿ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗಿದೆ. ಓಂಬುಡ್ಸ್ಮನ್ ನೇಮಕ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.
‘ಕರ್ನಾಟಕ ಮೈಕ್ರೋ ಫೈನಾನ್ಸ್ (ಬಲವಂತ ಕ್ರಮಗಳ ನಿಯಂತ್ರಣ) ಸುಗ್ರೀವಾಜ್ಞೆ-2025’ ಕರಡು ಸಿದ್ಧಗೊಂಡಿದ್ದು, ಒಂದೆರಡು ದಿನಗಳಲ್ಲಿ ಜಾರಿಯಾಗುವ ನಿರೀಕ್ಷೆ ಇದೆ.