ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ ಮಾಡುವ ಬಗ್ಗೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.
ಶಾಸಕ ಚನ್ನಬಸಪ್ಪನವರೇ, ಸಿದ್ದರಾಮಯ್ಯ ಅವರನ್ನು ಸಿದ್ರಮುಲ್ಲಾ ಖಾನ್ ಎಂದು ಜರಿದ ನಾಲಿಗೆ ಯಾರದ್ದು ? ಸಿದ್ದರಾಮಯ್ಯನವರ ತಲೆ ಕಡಿತಿವಿ ಎನ್ನುವ ಕ್ರೌರ್ಯದ ಪರಾಕಾಷ್ಟೆಯ ಮಾತುಗಳನ್ನಾಡಿದ ನಾಲಿಗೆ ಯಾರದ್ದು ? ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಪ್ರಶ್ನಿಸಿದರು.
ತನ್ನ ಪಾವಿತ್ರ್ಯತೆಯನ್ನು ಕಳೆದುಕೊಂಡಿರುವ ಇ.ಡಿ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವುದಾಗಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.
ಉಪಮುಖ್ಯಮಂತ್ರಿಗಳು ಮುಖ್ಯಮಂತ್ರಿ ಆದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ. ಪಕ್ಷದ ಹೈ ಕಮಾಂಡ್ ಶಕ್ತಿಯುತವಾಗಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು.
ನೀವು ಸಂವಿಧಾನ ಪಾಲಕರಾಗಿದ್ದರೆ ಶ್ರೀರಾಮಮಂದಿರ ನಿರ್ಮಾಣ ಬಳಿಕ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್ ಭಾಗವತ್ ಅವರ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಸವಾಲು ಹಾಕಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸಚಿವರ ಹೇಳಿಕೆ ಮುಂದುವರಿದಿದ್ದು, ಲೋಕಸಭೆ ಚುನಾವಣೆ ನಂತರ ಅಧ್ಯಕ್ಷರ ಬದಲಾವಣೆ ಕುರಿತಂತೆ ಹೈಕಮಾಂಡ್ ನಾಯಕರು ಈ ಹಿಂದೆ ನೀಡಿದ್ದ ಭರವಸೆಯಿಂದ ಉಂಟಾಗಿರುವ ಗೊಂದಲ ನಿವಾರಿಸುವಂತೆ ಗುರುವಾರವೂ ಆಗ್ರಹಿಸಿದ್ದಾರೆ.
ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಚಾರ. ಪಕ್ಷ ಸಂಘಟನೆ ವೇಗ ಕಳೆದುಕೊಂಡಿರುವುದರಿಂದ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.