ಚಿನ್ನ ಕಳ್ಳ ಸಾಗಣೆ ಸಂಬಂಧ ಡಿಜಿಪಿ ಮಲಮಗಳೂ ಆಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ, ಏಟ್ರಿಯಾ ಹೋಟಲ್ ಮಾಲೀಕರ ಮೊಮ್ಮಗ ತರುಣ್ ರಾಜು ಅವರು 25 ಬಾರಿ ದುಬೈಗೆ ಒಟ್ಟಿಗೆ ಪ್ರಯಾಣಿಸಿದ್ದರು ಎಂಬ ವಿಚಾರ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ) ತನಿಖೆಯಲ್ಲಿ ಬಯಲಾಗಿದೆ.
ನಟಿ ರನ್ಯಾ ರಾವ್ ಭಾಗಿಯಾಗಿರುವ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ಎರಡನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ
ನಟಿ ರನ್ಯಾ ರಾವ್ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ತನ್ನ ಸ್ನೇಹಿತ ಹಾಗೂ ಪಾಲುದಾರ ತರುಣ್ ರಾಜ್ನ ಅಮೆರಿಕ ಪಾಸ್ಪೋರ್ಟ್ ಬಳಸಿಕೊಂಡಿರುವುದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೂ ಮುನ್ನ ದುಬೈಗೆ ತೆರಳಿದ್ದ ನಟಿ ರನ್ಯಾರಾವ್ ಅವರ ಪಿಕಪ್ ಆ್ಯಂಡ್ ಡ್ರಾಪ್ಗೆ ವಿಮಾನ ನಿಲ್ದಾಣಕ್ಕೆ ಅವರ ಪತಿ ಹಾಗೂ ವಾಸ್ತು ಶಿಲ್ಪಿ ಜತಿನ್ ಹುಕ್ಕೇರಿ ಅವರ ಕಾರು ಚಾಲಕ ಬಂದಿದ್ದ.
‘ನಾನು ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಪಾಲ್ಗೊಂಡಿಲ್ಲ. ಯಾರನ್ನೋ ರಕ್ಷಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಕಾರಾಗೃಹದ ಅಧಿಕಾರಿಗಳಿಗೆ ನಟಿ ರನ್ಯಾ ರಾವ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ದುಬೈ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು 14.2 ಕೆ.ಜಿ. ಚಿನ್ನ ತಂದು ಕೊಟ್ಟು ಸಾಗಿಸುವ ಟಾಸ್ಕ್ ಕೊಟ್ಟಿದ್ದರು. ಆಗ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಕೂತು ಯೂಟ್ಯೂಬ್ ನೋಡಿ ಚಿನ್ನವನ್ನು ದೇಹದಲ್ಲಿ ಅಡಗಿಸಿಕೊಂಡು ತಂದಿದ್ದೆ’ ಎಂದು ನಟಿ ರನ್ಯಾ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.