90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಚನ್ನಪಟ್ಟಣ ಚುನಾವಣೆಯಲ್ಲಿ ಇಂಥವರೇ ಅಭ್ಯರ್ಥಿ ಎಂದು ಹೇಳಲಾಗದು. ಸಿ.ಪಿ.ಯೋಗೇಶ್ವರ ಅವರು ನಮ್ಮವರು. ಅಲ್ಲಿ 70 ಸಾವಿರ ಜೆಡಿಎಸ್ ಮತಗಳಿವೆ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ ಮಾಡುತ್ತೇವೆ.