ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ (ಜಾತಿ ಆಧಾರಿತ ಜನಗಣತಿ) ವರದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ವಿಶೇಷ ಸಚಿವ ಸಂಪುಟ ಸಭೆ ಗುರುವಾರ ಸಂಜೆ 4ಕ್ಕೆ ನಡೆಯಲಿದ್ದು, ಯಾವ ತೀರ್ಮಾನ ಹೊರ ಬೀಳಬಹುದು ಎಂಬ ಕುರಿತು ಇದೀಗ ತೀವ್ರ ಕುತೂಹಲ ನಿರ್ಮಾಣವಾಗಿದೆ.
ಸರ್ಕಾರ ವರದಿ ಜಾರಿ ತರದಿದ್ದರೆ ಬೀದಿ ಬೀದಿಯಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ‘ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಹಾಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಎಚ್ಚರಿಸಿದ್ದಾರೆ.