ಪೆನ್ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್ಡ್ರೈವ್ ಹಿಂದೆ ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ. ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.
ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಸ್ವಂತ ಅಣ್ಣ, ತಮ್ಮಂದಿರನ್ನೇ ಸಹಿಸುವುದಿಲ್ಲ. ಇನ್ನು ನನ್ನ ಹಾಗೂ ಚಲುವರಾಯಸ್ವಾಮಿ ಅವರನ್ನು ಸಹಿಸುತ್ತಾನೆಯೇ?, ಮಂಡ್ಯ ಸಂಸದನಾದ ಕಾರಣಕ್ಕೆ ಇಷ್ಟೆಲ್ಲಾ ಹೇಳುತ್ತಿದ್ದೇನೆ. ನಾನು ಅವನ ಮಗನನ್ನು ಗೆಲ್ಲಿಸಲು ನೋಡಿದೆ. ಆದರೆ, ಜನ ಸೋಲಿಸಿದರು.
ಮತ ನೀಡದ ಮುಸ್ಲಿಮರ ಗತಿ ಏನಾಗುತ್ತದೆ ನೋಡಿ ಎಂದು ಕುಮಾರಸ್ವಾಮಿ ಅವರು ಧಮಕಿ ಹಾಕಿದ್ದಾರೆ. ಮುಸ್ಲಿಂ ಮತದಾರರು ಇಲ್ಲದಿದ್ದರೆ ನೀವು, ನಿಮ್ಮ ತಂದೆ ವಿಧಾನಸಭೆಗೆ ಹೋಗುತ್ತಲೇ ಇರಲಿಲ್ಲ. ನಿಮ್ಮ ತಂದೆ ಮುಂದಿನ ಜನ್ಮದಲ್ಲಿ ಹುಟ್ಟಿದರೆ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದರು. ಈ ಮಾತು ಮರೆಯಬೇಡಿ
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಇವುಗಳನ್ನು ನಿಲ್ಲಿಸಬೇಕು ಎನ್ನುವ ಹುನ್ನಾರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ.
ಇಳಿ ವಯಸ್ಸಿನಲ್ಲಿ ಯಡಿಯೂರಪ್ಪ ಮೇಲೆ ಸುಳ್ಳು ಕೇಸು ಹಾಕಿ, ಅವರನ್ನು ಕೆಣಕಿ ನೋವು ಕೊಟ್ಟಿದ್ದೀರಿ. ನಮ್ಮ ಆಸ್ತಿ ಕೇಳಿ ನನ್ನನ್ನು ಕೆರಳಿಸಿದ್ದೀರಿ. ನಾನು ನನ್ನ ಕುಟುಂಬದ ಆಸ್ತಿ ಬಗ್ಗೆ ಯಾವ ತನಿಖೆಗೂ ಸಿದ್ಧನಿದ್ದೇನೆ - ಕುಮಾರಸ್ವಾಮಿ
ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ