ಲೋಕಸಭಾ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜನತಾದಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಂಬರೀಶ್ ಸೋಲಿಲ್ಲದ ಸರದಾರನೆಂಬಂತೆ ಇದ್ದ ಕಾಂಗ್ರೆಸ್ ಪಕ್ಷದ ಜಿ.ಮಾದೇಗೌಡರನ್ನು 1,80,523 ಮತಗಳ ಅಂತರದಿಂದ ಸೋಲಿಸಿ ಪ್ರಚಂಡ ಜಯಭೇರಿಯೊಂದಿಗೆ ಹೊಸ ದಾಖಲೆಯನ್ನೇ ಸೃಷ್ಟಿಸಿದ್ದರು.
ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.