ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.
ಮುಡಾ ಸೇರಿ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ತನ್ನ ತನಿಖಾಸ್ತ್ರ ಮುಂದುವರಿಸಿದೆ.