ಹೇಮಾವತಿ ಬಲಮೇಲ್ದಂಡೆ ನಾಲೆಗೆ ನೀರು

Jul 20 2025, 01:15 AM IST
ಹೇಮಾವತಿ ಬಲಮೇಲ್ದಂಡೆ ನಾಲೆಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ನಾಲಾ ಅಚ್ಚುಕಟ್ಟು ಪ್ರದೇಶದ ರೈತರು ನೀರನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆದು ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳುವಂತೆ ಶಾಸಕ ಎ.ಮಂಜು ತಿಳಿಸಿದರು. ನಾಲಾ ವ್ಯಾಪ್ತಿಯಲ್ಲಿ 210 ಕೆರೆಗಳನ್ನು ಭರ್ತಿಮಾಡಲಾಗುತ್ತಿದೆ. ಹೇಮಾವತಿ ಜಲಾಶಯ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ್ ಅವರ ಶ್ರಮ ಕಾರಣವಾಗಿದ್ದು ಜಲಾಶಯದ ಮುಂಭಾಗ ಇವರ ಪುತ್ಥಳಿ ಸ್ಥಾಪಿಸಬೇಕು ಎಂಬುದು ತಮ್ಮ ಬಹುದಿನಗಳ ಆಶಯವಾಗಿದೆ. ತಾವು ಸಚಿವನಾಗಿದ್ದಾಗ ಈ ಪ್ರಯತ್ನ ನಡೆಸಿದ್ದೆ, ಆದರೆ ಕೆಲವರು ಇದಕ್ಕೆ ತಡೆಯೊಡ್ಡಿದರು, ನಂಜೇಗೌಡರ ಪ್ರಯತ್ನದ ಫಲವಾಗಿ ಬಲಮೇಲ್ದಂಡೆ ನಾಲೆ ರೂಪುಗೊಂಡಿದೆ ಎಂದರು.