• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಎಲ್‌ಬಿಸಿ-76 ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಧರಣಿ

Jan 08 2025, 12:15 AM IST
ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿ ಆವರಣದಲ್ಲಿ ಧರಣಿ ನಿರತ ರೈತರೊಂದಿಗೆ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯಲಕ್ಷ್ಮಿ ಚರ್ಚೆ ನಡೆಸಿದರು.

ಅರ್ಧ ಮಂಗಳೂರಿಗೆ ಅಶುದ್ಧ ನೀರು ಪೂರೈಕೆ ಬಗ್ಗೆ ಸಿಎಂಗೆ ವರದಿ: ಐವನ್‌

Jan 08 2025, 12:15 AM IST
ಪಂಜಿಮೊಗರು ಪ್ರದೇಶದಲ್ಲಿರುವ ನನ್ನ ಮನೆಗೂ ಶುದ್ಧೀಕರಣ ಆಗದ ಕಲುಷಿತ ನೀರೇ ಸರಬರಾಜಾಗುತ್ತಿದೆ ಎಂದು ವಿಪಕ್ಷ ನಾಯಕ ಅನಿಲ್‌ ಕುಮಾರ್‌ ಗಂಭೀರ ಆರೋಪ ಮಾಡಿದರು. ಒಂದು ತಿಂಗಳ ಅವಧಿಯಲ್ಲಿ ತನ್ನ ಮನೆಯ ಟ್ಯಾಂಕ್‌ ಶುದ್ಧೀಕರಿಸಿದ ಸಂದರ್ಭ ಕಲುಷಿತ ನೀರು ಹೊರಹಾಕುವ ವಿಡಿಯೊವನ್ನು ಅವರು ಇದೇ ಸಂದರ್ಭ ಪ್ರದರ್ಶಿಸಿದರು.

ಮಲಪ್ರಭಾ ಜಲಾಶಯ ಕಾಲುವೆ ಕೆಳಭಾಗದ ರೈತರಿಗೆ ನೀರು ಪೂರೈಸಿ: ಎಸ್.ಬಿ. ಜೋಗಣ್ಣವರ

Jan 07 2025, 12:32 AM IST
ನೀರಾವರಿ ಇಲಾಖೆ ಅಧಿಕಾರಿಗಳು, ನೀರು ಪೂರೈಕೆ ಮಾಡುವ ಗುತ್ತಿಗೆದಾರರು ರೈತರ ಜಮೀನಿಗೆ ಸರಿಯಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಳಭಾಗದ ರೈತರು ನೀರಾವರಿ ಇಲಾಖೆ ಕಚೇರಿಗೆ ಬೀಗ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ ಎಂದು ರೈತ ಸೇನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.

ಬೇಸಿಗೆ ಬೆಳೆಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಿ: ಎಂ.ವಿ.ರಾಜೇಗೌಡ ಆಗ್ರಹ

Jan 07 2025, 12:16 AM IST
ಜಿಲ್ಲೆಯ ಜೀವನಾಡಿಗಳಾದ ಕೃಷ್ಣರಾಜಸಾಗರ ಮತ್ತು ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯಗಳು ಭರ್ತಿಯಾಗಿ ಜನವರಿ ತಿಂಗಳಿನಲ್ಲಿಯೂ ತುಂಬಿ ತುಳುತ್ತಿವೆ. ಇದರಿಂದ ಜಿಲ್ಲೆಯ ರೈತ ಸಮೂಹದಲ್ಲಿ ಹರ್ಷ ತಂದಿದೆ ಎಂದು ತಿಳಿಸಿದ್ದಾರೆ.

ನಾಲೆಗಳಿಗೆ ಹರಿಯುವ ನೀರು ಸ್ಥಗಿತ: ರೈತ ಸಂಘ, ವಿವಿಧ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ

Jan 07 2025, 12:16 AM IST
ನಾಲೆಗಳ ಆಧುನೀಕರಣ ಬೇಡವೆಂದು ಹೇಳುತ್ತಿಲ್ಲ. ಆದರೆ ನಾಲೆಗಳಿಗೆ ನೀರನ್ನು ಕಟ್ಟು ಪದ್ಧತಿಯಲ್ಲಿ ಹರಿಸಬೇಕು. ನಿಲ್ಲಿಸಿದಾಗ ನಾಲಾ ದುರಸ್ತಿ ಕೆಲಸ ಮಾಡಿಕೊಳ್ಳಲಿ. ನೀರು ನಿಲ್ಲಿಸಿರುವುದರಿಂದ ಈಗ ಬೆಳೆದು ನಿಂತಿರುವ ಬೆಳೆಗಳ ಗತಿಯೇನು? ನಿರಂತರವಾಗಿ ನೀರು ನಿಲ್ಲಿಸುವುದಕ್ಕೆ ನಮ್ಮ ವಿರೋಧವಿದೆ, ಈ ಸರ್ಕಾರ ರೈತರಿಗೆ ತೊಂದರೆ ಕೊಡುವುದಕ್ಕೇ ಇದೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಕುಮಟಾ ತಾಲೂಕಿನ ವಿವಿಧೆಡೆ ಭತ್ತದ ಗದ್ದೆಗಳಿಗೆ ನುಗ್ಗಿದ ಉಪ್ಪು ನೀರು

Jan 06 2025, 01:04 AM IST
ಯಾರದೋ ನಿರ್ಲಕ್ಷ್ಯಕ್ಕೆ ನದಿಯ ಹಿನ್ನೀರು ನುಗ್ಗಿ ನೂರಾರು ಎಕರೆ ಭತ್ತ ಬೆಳೆಯುವ ಗದ್ದೆಗಳು ಬರಡಾಗಿದ್ದು, ತಕ್ಷಣ ಕ್ರಮ ಕೈಗೊಂಡು ರೈತರ ಹಿತ ರಕ್ಷಿಸಬೇಕಿದೆ.

ನಾಲೆಗಳ ಆಧುನೀಕರಣ ಕಾರಣ ನೀಡಿ ನೀರು ನಿಲ್ಲಿಸಿದರೆ ಹೋರಾಟ: ಮಧು ಜಿ.ಮಾದೇಗೌಡ ಎಚ್ಚರಿಕೆ

Jan 06 2025, 01:00 AM IST
ಸದ್ಯ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ 124.30 ಅಡಿ ನೀರಿದೆ. ಇದನ್ನು ನಂಬಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಹಾಕಿದ್ದಾರೆ. ಈ ವೇಳೆ ನೀರು ನಿಲ್ಲಿಸಿದರೆ ರೈತರು ಅಪಾರ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಈಗ ನೀರು ನಿಲ್ಲಿಸದೆ ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಕೊಡಬೇಕು.

ಭರಮಸಾಗರ ಕೆರೆಯ ತಟದಲ್ಲಿ ಮಲಿನ ನೀರು ಸಂಸ್ಕರಣೆ ಘಟಕ

Jan 06 2025, 01:00 AM IST
ದೆಹಲಿ ಗ್ರೀನ್‌ ಗ್ರಾಸ್‌ ಪ್ರೊ ಸಂಸ್ಥೆಯ ಅಧಿಕಾರಿಗಳು ಹಾಗೂ ಜಿಪಂ ಅಧಿಕಾರಿಗಳು ಭರಮಸಾಗರ ಕೆರೆಯ ಸಮೀಪ ಮಲಿನ ನೀರು ಸಂಸ್ಕರಣೆ ಘಟಕ ಸ್ಥಾಪನೆ ಮಾಡಲು ಸ್ಥಳ ಪರಿಶೀಲನೆ ಮಾಡಿದರು.

ನಿರಂತರ ನೀರು ಯೋಜನೆಗೆ ಹಣ ಪಾವತಿ, ತನಿಖೆಗೆ ಸೂಚನೆ

Jan 05 2025, 01:30 AM IST
ಜಿಲ್ಲಾ ಕೇಂದ್ರ ಹಾವೇರಿ ನಗರಕ್ಕೆ ನಿರಂತರ ನೀರು (24*7) ಸರಬರಾಜು ಮಾಡುವ ಯೋಜನೆ ಒಂದೂ ವಲಯದಲ್ಲೂ ಪೂರ್ಣಗೊಂಡಿಲ್ಲ. ಆದರೂ ಗುತ್ತಿಗೆದಾರರಿಗೆ 30 ಕೋಟಿ ರು. ಪಾವತಿಸಲಾಗಿದೆ. ಯಾರ್ಯಾುರ ಕಾಲದಲ್ಲಿ ಎಷ್ಟೆಷ್ಟು ಹಣ ಭರಿಸಲಾಗಿದೆ ಎಂಬುದನ್ನು ತನಿಖೆ ನಡೆಸಿ ಅವರಿಂದಲೇ ಹಣ ವಸೂಲಿ ಮಾಡಲು ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಾಕೀತು ಮಾಡಿದರು.

ಮಂಗಳೂರಿನ ಶೇ.50ರಷ್ಟು ಪ್ರದೇಶಗಳಿಗೆ ಶುದ್ಧೀಕರಿಸದ ನೀರು: ಆರೋಪ

Jan 05 2025, 01:30 AM IST
ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಮಾತನಾಡಿ, ತ್ಯಾಜ್ಯ ನೀರು ರಾಜಕಾಲುವೆಗಳಲ್ಲಿ ಹರಿಯುತ್ತಾ ನದಿಗಳನ್ನು ಸೇರುತ್ತಿದೆ. ಈ ಬಗ್ಗೆ ದೊಡ್ಡ ಸುಧಾರಣೆಯ ಅಗತ್ಯವಿದೆ. ಆದ್ದರಿಂದ ಆಡಳಿತ- ವಿಪಕ್ಷ ಸದಸ್ಯರನ್ನು ಸೇರಿಸಿಕೊಂಡು ತನಿಖೆಗೆ ಆದೇಶ ಮಾಡಬೇಕು ಎಂದು ಸಲಹೆ ನೀಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 182
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved